ಬ್ರೇಕಿಂಗ್ ನ್ಯೂಸ್
27-03-24 11:53 am HK News Desk ಕರ್ನಾಟಕ
ಶಿವಮೊಗ್ಗ, ಮಾ.27: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್ಐಎ ಟೀಂ ದಾಳಿ ನಡೆಸಿದ್ದು ಹಲವರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನಲ್ಲಿ ಎನ್ಐಎ ದಾಳಿ ನಡೆಸಿದ್ದಾರೆ. ಕೆಲವು ಶಂಕಿತರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆದಿದ್ದು ತೀವ್ರ ಶೋಧ ನಡೆಸಿದ್ದಾರೆ.
ಕೆಫೆ ಬ್ಲಾಸ್ಟ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು ಅದರ ಬೆನ್ನಲ್ಲೇ ತೀರ್ಥಹಳ್ಳಿಯಲ್ಲಿ ದಾಳಿಯಾಗಿದೆ. ಹೀಗಾಗಿ ಕೆಫೆ ಬಾಂಬ್ ಸ್ಫೋಟದ ಕೃತ್ಯವನ್ನು ತೀರ್ಥಹಳ್ಳಿ ಮೂಲದವರೇ ಮಾಡಿರುವ ಬಗ್ಗೆ ಗಂಭೀರ ಅನುಮಾನ ಮೂಡಿದೆ. ಈಗಾಗಲೇ ತೀರ್ಥಹಳ್ಳಿ ಮೂಲದ ಮುಸಾವಿರ್ ಎಂಬಾತ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಲವು ಸಾಕ್ಷ್ಯಗಳನ್ನು ಉಲ್ಲೇಖಿಸಿ ವರದಿಯಾಗಿತ್ತು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್, ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ನಿವಾಸಿಯಾಗಿದ್ದ. ಇದೀಗ ಅದೇ ಜಾಗದಲ್ಲಿ ಎನ್ಐಎ ದಾಳಿ ನಡೆದಿರುವುದರಿಂದ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಸಿದ್ದಾರೆ ಎನ್ನಲಾಗುತ್ತಿದೆ.
National Investigation Agency (NIA) officials conducted simultaneous raids at several locations in Thirthahalli on Wednesday morning reportedly in connection with the Bengaluru Rameshwaram Cafe blast case.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am