ಬ್ರೇಕಿಂಗ್ ನ್ಯೂಸ್
27-03-24 08:56 pm HK NEWS ಕರ್ನಾಟಕ
ಬೆಂಗಳೂರು, ಮಾ.27: ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಆಮೂಲಕ ಹಾಲಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿಗೆ ಕೊಕ್ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದಲ್ಲಿ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದ, ಯಡಿಯೂರಪ್ಪ ಪಾಳಯದ ಹಿಂದುಳಿದ ವರ್ಗದ ನಾಯಕ, ಐದು ಬಾರಿಯ ಶಾಸಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಅಂತಿಮಗೊಳಿಸಿರುವುದನ್ನ ಬಿಜೆಪಿ ಘೋಷಣೆ ಮಾಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲ 25 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದಂತಾಗಿದೆ.
ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿಂದಿನಿಂದಲೂ ಪ್ರತಿ ಬಾರಿ ಹೊಸಬರನ್ನು ಕಣಕ್ಕಿಳಿಸುತ್ತ ಬಂದಿದೆ. ಈ ಬಾರಿ ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಮಾದಾರ ಚನ್ನಯ್ಯ ಸ್ವಾಮೀಜಿ, ಜನಾರ್ದನ ಸ್ವಾಮಿ ಸಹಿತ ಹಲವರ ಹೆಸರು ಕೇಳಿಬಂದಿದ್ದವು. ಗೋವಿಂದ ಕಾರಜೋಳ ಹೆಸರು ವಿಜಯಪುರ ಕ್ಷೇತ್ರಕ್ಕೂ ಕೇಳಿಬಂದಿತ್ತು.
ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಸಹಾಯಕರಾಗಿ ವೃತ್ತಿ ಆರಂಭಿಸಿ ಬಳಿಕ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದ ಕಾರಜೋಳ, ಆನಂತರ ಅದೇ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವರಾಗಿದ್ದು ಕಾಕತಾಳೀಯ ಆಗಿತ್ತು. ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದರೂ ರಾಜಕೀಯ ಸಾಧನೆ ಮಾಡಿದ್ದು ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ. ಈಗ ಚಿತ್ರದುರ್ಗ ಜಿಲ್ಲೆಗೆ ಅವರ ರಾಜಕೀಯ ಸ್ಥಳಾಂತರಗೊಂಡಿದೆ. ಕಳೆದ ಬಾರಿ ಬೆಂಗಳೂರು ಆನೇಕಲ್ ಮೂಲದ ನಾರಾಯಣ ಸ್ವಾಮಿ ಚಿತ್ರದುರ್ಗದಲ್ಲಿ ಲೋಕಸಭೆ ಕಣಕ್ಕಿಳಿದು ಸಂಸದರಾಗಿದ್ದರು.
BJP Loksabha election 7th list released, Govind karjol to Fight Lok Sabha Elections From Chitradurga on bjp ticket BJP
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm