ಬ್ರೇಕಿಂಗ್ ನ್ಯೂಸ್
27-03-24 08:56 pm HK NEWS ಕರ್ನಾಟಕ
ಬೆಂಗಳೂರು, ಮಾ.27: ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಆಮೂಲಕ ಹಾಲಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿಗೆ ಕೊಕ್ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದಲ್ಲಿ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದ, ಯಡಿಯೂರಪ್ಪ ಪಾಳಯದ ಹಿಂದುಳಿದ ವರ್ಗದ ನಾಯಕ, ಐದು ಬಾರಿಯ ಶಾಸಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಅಂತಿಮಗೊಳಿಸಿರುವುದನ್ನ ಬಿಜೆಪಿ ಘೋಷಣೆ ಮಾಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲ 25 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದಂತಾಗಿದೆ.
ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿಂದಿನಿಂದಲೂ ಪ್ರತಿ ಬಾರಿ ಹೊಸಬರನ್ನು ಕಣಕ್ಕಿಳಿಸುತ್ತ ಬಂದಿದೆ. ಈ ಬಾರಿ ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಮಾದಾರ ಚನ್ನಯ್ಯ ಸ್ವಾಮೀಜಿ, ಜನಾರ್ದನ ಸ್ವಾಮಿ ಸಹಿತ ಹಲವರ ಹೆಸರು ಕೇಳಿಬಂದಿದ್ದವು. ಗೋವಿಂದ ಕಾರಜೋಳ ಹೆಸರು ವಿಜಯಪುರ ಕ್ಷೇತ್ರಕ್ಕೂ ಕೇಳಿಬಂದಿತ್ತು.
ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಸಹಾಯಕರಾಗಿ ವೃತ್ತಿ ಆರಂಭಿಸಿ ಬಳಿಕ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದ ಕಾರಜೋಳ, ಆನಂತರ ಅದೇ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವರಾಗಿದ್ದು ಕಾಕತಾಳೀಯ ಆಗಿತ್ತು. ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದರೂ ರಾಜಕೀಯ ಸಾಧನೆ ಮಾಡಿದ್ದು ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ. ಈಗ ಚಿತ್ರದುರ್ಗ ಜಿಲ್ಲೆಗೆ ಅವರ ರಾಜಕೀಯ ಸ್ಥಳಾಂತರಗೊಂಡಿದೆ. ಕಳೆದ ಬಾರಿ ಬೆಂಗಳೂರು ಆನೇಕಲ್ ಮೂಲದ ನಾರಾಯಣ ಸ್ವಾಮಿ ಚಿತ್ರದುರ್ಗದಲ್ಲಿ ಲೋಕಸಭೆ ಕಣಕ್ಕಿಳಿದು ಸಂಸದರಾಗಿದ್ದರು.
BJP Loksabha election 7th list released, Govind karjol to Fight Lok Sabha Elections From Chitradurga on bjp ticket BJP
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm