ಬ್ರೇಕಿಂಗ್ ನ್ಯೂಸ್
28-11-20 04:32 pm Headline Karnataka News Network ಕರ್ನಾಟಕ
ಕಾರವಾರ, ನ.28: ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರೆ, ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಿ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಏನೋ ಸ್ವಲ್ಪ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಡಿಕೆಶಿ ಈ ರೀತಿ ತಿರುಗೇಟು ನೀಡಿದರು. ಶನಿವಾರ ಕಾರವಾರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಹಿಂದಿನ ಸರಕಾರದಲ್ಲಿ ನಾನು ಕೂಡ ಭಾಗವಾಗಿದ್ದೆ. ನನ್ನ ಮೇಲೂ ಎಫ್ಐಆರ್ ಹಾಕಲಿ. ನಮ್ಮ ಸರಕಾರದಲ್ಲಿದ್ದವರು ಇದೀಗ ಅವರ ಸರಕಾರದಲ್ಲೂ ಇದ್ದಾರಲ್ಲ, ಅವರ ಮೇಲೂ ಎಫ್ಐಆರ್ ದಾಖಲಿಸಲಿ ಎಂದು ಕುಟುಕಿದರು.
ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ. ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ಹಿಂದೆ ಗೌಪ್ಯವಾದ ವಿಚಾರಗಳು ಅಡಗಿವೆ. ಆದ್ದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅದು ಸರಕಾರದ ಮಟ್ಟದಲ್ಲಿ ನಡೆದರೆ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬಿಜೆಪಿಯವರ ಆಂತರಿಕ ವಿಚಾರಗಳಲ್ಲಿ ನಾವು ತಲೆ ಹಾಕುವುದಿಲ್ಲ. ನಮ್ಮ ಪಕ್ಷದಿಂದ ಅಲ್ಲಿಗೆ ಹೋದ ಕೆಲವರು ಬಿಜೆಪಿಗೇನು ಮಾಡಬೇಕೋ ಅದನ್ನು ಮಾಡ್ತಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸ್ತಾರೆ ಎಂದು ಹೇಳಿದರು.
Congress Dk Shivakumar has mocked at Naleen Kumar Kateel saying he's mentally not well.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm