ಬ್ರೇಕಿಂಗ್ ನ್ಯೂಸ್
28-11-20 04:32 pm Headline Karnataka News Network ಕರ್ನಾಟಕ
ಕಾರವಾರ, ನ.28: ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರೆ, ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಿ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಏನೋ ಸ್ವಲ್ಪ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಡಿಕೆಶಿ ಈ ರೀತಿ ತಿರುಗೇಟು ನೀಡಿದರು. ಶನಿವಾರ ಕಾರವಾರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಹಿಂದಿನ ಸರಕಾರದಲ್ಲಿ ನಾನು ಕೂಡ ಭಾಗವಾಗಿದ್ದೆ. ನನ್ನ ಮೇಲೂ ಎಫ್ಐಆರ್ ಹಾಕಲಿ. ನಮ್ಮ ಸರಕಾರದಲ್ಲಿದ್ದವರು ಇದೀಗ ಅವರ ಸರಕಾರದಲ್ಲೂ ಇದ್ದಾರಲ್ಲ, ಅವರ ಮೇಲೂ ಎಫ್ಐಆರ್ ದಾಖಲಿಸಲಿ ಎಂದು ಕುಟುಕಿದರು.

ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ. ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ಹಿಂದೆ ಗೌಪ್ಯವಾದ ವಿಚಾರಗಳು ಅಡಗಿವೆ. ಆದ್ದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅದು ಸರಕಾರದ ಮಟ್ಟದಲ್ಲಿ ನಡೆದರೆ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬಿಜೆಪಿಯವರ ಆಂತರಿಕ ವಿಚಾರಗಳಲ್ಲಿ ನಾವು ತಲೆ ಹಾಕುವುದಿಲ್ಲ. ನಮ್ಮ ಪಕ್ಷದಿಂದ ಅಲ್ಲಿಗೆ ಹೋದ ಕೆಲವರು ಬಿಜೆಪಿಗೇನು ಮಾಡಬೇಕೋ ಅದನ್ನು ಮಾಡ್ತಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸ್ತಾರೆ ಎಂದು ಹೇಳಿದರು.
Congress Dk Shivakumar has mocked at Naleen Kumar Kateel saying he's mentally not well.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm