ಬ್ರೇಕಿಂಗ್ ನ್ಯೂಸ್
28-11-20 04:32 pm Headline Karnataka News Network ಕರ್ನಾಟಕ
ಕಾರವಾರ, ನ.28: ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರೆ, ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಿ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಏನೋ ಸ್ವಲ್ಪ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಡಿಕೆಶಿ ಈ ರೀತಿ ತಿರುಗೇಟು ನೀಡಿದರು. ಶನಿವಾರ ಕಾರವಾರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಹಿಂದಿನ ಸರಕಾರದಲ್ಲಿ ನಾನು ಕೂಡ ಭಾಗವಾಗಿದ್ದೆ. ನನ್ನ ಮೇಲೂ ಎಫ್ಐಆರ್ ಹಾಕಲಿ. ನಮ್ಮ ಸರಕಾರದಲ್ಲಿದ್ದವರು ಇದೀಗ ಅವರ ಸರಕಾರದಲ್ಲೂ ಇದ್ದಾರಲ್ಲ, ಅವರ ಮೇಲೂ ಎಫ್ಐಆರ್ ದಾಖಲಿಸಲಿ ಎಂದು ಕುಟುಕಿದರು.

ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ. ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ಹಿಂದೆ ಗೌಪ್ಯವಾದ ವಿಚಾರಗಳು ಅಡಗಿವೆ. ಆದ್ದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅದು ಸರಕಾರದ ಮಟ್ಟದಲ್ಲಿ ನಡೆದರೆ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬಿಜೆಪಿಯವರ ಆಂತರಿಕ ವಿಚಾರಗಳಲ್ಲಿ ನಾವು ತಲೆ ಹಾಕುವುದಿಲ್ಲ. ನಮ್ಮ ಪಕ್ಷದಿಂದ ಅಲ್ಲಿಗೆ ಹೋದ ಕೆಲವರು ಬಿಜೆಪಿಗೇನು ಮಾಡಬೇಕೋ ಅದನ್ನು ಮಾಡ್ತಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸ್ತಾರೆ ಎಂದು ಹೇಳಿದರು.
Congress Dk Shivakumar has mocked at Naleen Kumar Kateel saying he's mentally not well.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm