ಬ್ರೇಕಿಂಗ್ ನ್ಯೂಸ್
28-03-24 08:44 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಪ್ರಮುಖ ಸಂಚುಕೋರ ಎನ್ನಲಾದ ಮುಝಾಮಿಲ್ ಶರೀಫ್ ಎಂಬಾತನನ್ನು ಬಂಧಿಸಿದ್ದಾರೆ.
ಎರಡು ದಿನಗಳಿಂದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕರ್ನಾಟಕದ 12 ಕಡೆ, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ ಒಂದು ಕಡೆ ಏಕಕಾಲದಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ, ಮುಝಾಮಿಲ್ ಶರೀಫ್ ಎಂಬಾತನನ್ನು ಪ್ರಮುಖ ಸಂಚುಕೋರ ಎಂದು ಹೆಸರಿಸಿ ಅರೆಸ್ಟ್ ಮಾಡಿದ್ದಾರೆ.
ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ತನಿಖೆ ಕೈಗೆತ್ತಿಕೊಂಡಿದ್ದ ಎನ್ಐಎ ಅಧಿಕಾರಿಗಳು ಸಿಸಿಟಿವಿ ಆಧರಿಸಿ ಬಾಂಬ್ ಇರಿಸಿ ಹೋಗಿದ್ದ ವ್ಯಕ್ತಿಯನ್ನು ತೀರ್ಥಹಳ್ಳಿ ಮೂಲದ ಮುಸಾವಿರ್ ಶಜೀಬ್ ಹುಸೇನ್ ಎಂದು ಗುರುತಿಸಿದ್ದರು. ಅಲ್ಲದೆ, ಕೃತ್ಯಕ್ಕೆ ಆತನ ಸಹಚರ ಅಬ್ದುಲ್ ಮತೀನ್ ತಾಹಾ ಸಹಕಾರ ನೀಡಿದ್ದ ಎಂದೂ ಪತ್ತೆ ಮಾಡಿದ್ದರು. ಘಟನೆಗೂ ಮುನ್ನ ಎರಡು ತಿಂಗಳ ಕಾಲ ಇವರಿಬ್ಬರು ಚೆನ್ನೈನಲ್ಲಿ ಉಳಿದುಕೊಂಡಿದ್ದರು ಎನ್ನುವುದನ್ನೂ ಪತ್ತೆ ಹಚ್ಚಿದ್ದರು.
ಕಾರ್ಯಾಚರಣೆ ಬಗ್ಗೆ ಎನ್ಐಎ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಮುಝಾಮಿಲ್ ಶರೀಫ್ ಎಂಬಾತ ಇಬ್ಬರು ಆರೋಪಿಗಳಿಗೆ ರಾಮೇಶ್ವರ ಕೆಫೆಯಲ್ಲಿ ಇರಿಸಲಾಗಿದ್ದ ಐಇಡಿ ಬಾಂಬ್ ಸಾಮಗ್ರಿಯನ್ನು ತಲುಪಿಸಲು ಸಹಕರಿಸಿದ್ದ ಎಂದು ಹೇಳಿದೆ. ಮಾರ್ಚ್ 1ರಂದು ಕೆಫೆಯಲ್ಲಿ ಐಇಡಿ ಬಾಂಬ್ ಸ್ಫೋಟಗೊಂಡು ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದರು. ಬ್ಲಾಸ್ಟ್ ಆದ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಸ್ಫೋಟಕ್ಕೂ ಮುನ್ನ ಬಂದು ಹೋಗಿದ್ದ ವ್ಯಕ್ತಿಯೊಬ್ಬ ಚೀಲದಲ್ಲಿ ಬಾಂಬ್ ಅನ್ನು ಇಟ್ಟು ಹೋಗಿರುವುದೂ ಸೆರೆಯಾಗಿತ್ತು.
ಮುಸಾವಿರ್ ಮತ್ತು ಅಬ್ದುಲ್ ಮತೀನ್ ಕೃತ್ಯ ಎಸಗಿದವರು ಎಂದು ಎನ್ಐಎ ಅಧಿಕಾರಿಗಳು ದೃಢಪಡಿಸಿದ್ದು, ಆ ಹಿನ್ನೆಲೆಯಲ್ಲಿ ಶಿವಮೊಗ್ಗದ ತೀರ್ಥಹಳ್ಳಿಯ ಅವರ ಮನೆಗಳು, ಶಾಪ್ ಗಳು, ಅವರ ಸಹವರ್ತಿಗಳ ಭಟ್ಕಳದ ಮನೆಗಳಿಗೆ ದಾಳಿ ನಡೆಸಲಾಗಿತ್ತು. ಈ ವೇಳೆ, ಹಲವಾರು ಡಿಜಿಟಲ್ ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿತ್ತು. ಪ್ರಮುಖ ಆರೋಪಿಗಳಾದ ಮುಸಾವಿರ್ ಮತ್ತು ಅಬ್ದುಲ್ ಮತೀನ್ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದೀಗ ಅರೆಸ್ಟ್ ಆಗಿರುವ ಮುಝಾಮಿಲ್ ಶರೀಫ್ ಎಲ್ಲಿಯವನು ಎಂಬ ಬಗ್ಗೆ ಎನ್ಐಎ ಅಧಿಕಾರಿಗಳು ಮಾಹಿತಿ ಬಿಟ್ಟುಕೊಟ್ಟಿಲ್ಲ.
The key conspirator in the Rameshwaram cafe blast case in Bangalore Muzammil Shareef is arrested by the National Investigation Agency today after massive raids across multiple locations in three states. Several customers and hotel staff members were injured in the blast on March 1, which caused extensive damage to the popular cafe.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm