ಬ್ರೇಕಿಂಗ್ ನ್ಯೂಸ್
28-03-24 09:45 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ಮತ್ತೊಮ್ಮೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ, ನಾಮಪತ್ರದಲ್ಲಿ ಒಟ್ಟು ಆಸ್ತಿ ಮೌಲ್ಯ 598 ಕೋಟಿ ರೂ. ಎಂದು ಘೋಷಿಸಿದ್ದಾರೆ.
ಡಿಕೆ ಸುರೇಶ್ ಅವರ ಆಸ್ತಿಯಲ್ಲಿ ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಹೆಚ್ಚಳವಾಗಿದೆ. ಅಲ್ಲದೆ ಒಟ್ಟು 207 ಕೋಟಿ ರೂಪಾಯಿ ಸಾಲ ಇರುವುದಾಗಿ ತೋರಿಸಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ ಶಿವಕುಮಾರ್ ಅವರ ಕಿರಿಯ ಸಹೋದರ ಸುರೇಶ್ ಅವರು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ 339 ಕೋಟಿ ರೂ. ಆಸ್ತಿ ಮೌಲ್ಯ ಘೋಷಿಸಿದ್ದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೂರು ಬಾರಿ ಸಂಸದರಾಗಿರುವ ಸುರೇಶ್ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಬ್ಯಾಂಕ್ಗಳಲ್ಲಿ 16.61 ಕೋಟಿ ರೂ. ಠೇವಣಿ ಹೊಂದಿದ್ದಾರೆ. 57 ವರ್ಷದ ಸಂಸದ ಸುರೇಶ್ 32.76 ಕೋಟಿ ಮೌಲ್ಯದ 21 ಸ್ಥಳಗಳಲ್ಲಿ ಕೃಷಿ ಭೂಮಿ, 210.47 ಕೋಟಿ ಮೌಲ್ಯದ 27 ಸ್ಥಳಗಳಲ್ಲಿ ಕೃಷಿಯೇತರ ಭೂಮಿ, 211.91 ಕೋಟಿ ಮೌಲ್ಯದ ಒಂಬತ್ತು ವಾಣಿಜ್ಯ ಕಟ್ಟಡಗಳು ಮತ್ತು 27.13 ಕೋಟಿ ಮೌಲ್ಯದ ಮೂರು ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನು ಡಿ.ಕೆ. ಸುರೇಶ್ ಸ್ವಂತ ಕಾರು ಹೊಂದಿಲ್ಲ. ಮನೆಯಲ್ಲಿ 70 ಲಕ್ಷ ರೂ. ಮೌಲ್ಯದ ಪೀಠೋಪಕರಣ ಹೊಂದಿರುವುದಾಗಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ, ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿಕೆ ಸುರೇಶ್ ಎದುರಾಳಿಯಾಗಿ ಕಣಕ್ಕಿಳಿಸಿದೆ. ಮಂಜುನಾಥ್ ಅವರು 17 ವರ್ಷಗಳ ಕಾಲ ಸರ್ಕಾರಿ ಸ್ವಾಮ್ಯದ ಜಯದೇವ ಹೃದಯ, ರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯಸ್ಥರಾಗಿದ್ದು ಇದೇ ವರ್ಷದ ಜನವರಿಯಲ್ಲಿ ನಿವೃತ್ತರಾಗಿದ್ದರು.
Congress’s Bangalore Rural Lok Sabha election candidate D K Suresh has declared assets worth Rs 593 crore, which is a 75 per cent increase from his worth five years ago, according to his affidavit submitted to the Election Commission on Thursday. Five years ago, Suresh’s assets were worth Rs 338 crore.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm