ಬ್ರೇಕಿಂಗ್ ನ್ಯೂಸ್
29-03-24 03:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯದಲ್ಲಿ ಬರದ ಬೇಗೆಗೆ ಹೈರಾಣಾಗಿರುವ ಜನತೆಗೆ ಮುಂದಿನ ಐದು ದಿನಗಳಲ್ಲಿ ಮತ್ತಷ್ಟು ಬಿಸಿಲ ಝಳ ತಟ್ಟಲಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಐದು ದಿನಗಳಲ್ಲಿ ಅತಿಯಾದ ಉಷ್ಣ ಮಾರುತ ಬೀಸಲಿದ್ದು, ಗರಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕೂಲ್ ಸಿಟಿಯೆಂದೇ ಹೆಸರಾಗಿದ್ದ ಬೆಂಗಳೂರಿನಲ್ಲಿಯೂ ಕರಾವಳಿಯ ರೀತಿ ಬಿಸಿಲ ಬೇಗೆ ಆವರಿಸಿದ್ದು, ಈ ದಿನಗಳಲ್ಲಿ 36 ಡಿಗ್ರಿ ಉಷ್ಣತೆ ದಾಖಲಾಗುವ ಸಾಧ್ಯತೆಯಿದೆ. ಮಾ.29ರಂದು ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಮಾರುತ ಹೆಚ್ಚಿರುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಹೇಳಿದೆ.
ಮಾ.28ರಂದು ರಾಯಚೂರು ಜಿಲ್ಲೆಯ ಹಡಗನಾಳ್ ಹೋಬಳಿಯಲ್ಲಿ ಅತ್ಯಧಿಕ 42.6 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರಗೇಶಗಳಲ್ಲಿ 41ರಿಂದ 42 ಡಿಗ್ರಿ ತಾಪಮಾನ ಕಂಡುಬಂದಿದೆ. ಗರಿಷ್ಠ ತಾಪಮಾನದ ಕಾರಣ ಯಾದಗಿರಿ, ಯಲ್ಲಾಪುರ, ಶಹಾಪುರ, ವಾಡಿ, ಭದ್ರಾವತಿಯ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆಯಿದ್ದು ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
The people of the state, who are reeling under the heat of drought, will get more heat wave in the next five days. The met department has warned of extreme heat wave conditions in the north and south interior parts of the state over the next five days and a rise of 2 to 3 degrees Celsius in the maximum temperature.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm