ಬ್ರೇಕಿಂಗ್ ನ್ಯೂಸ್
29-03-24 03:43 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಮುನಿಸಿಕೊಂಡಿದ್ದ ಶಾಸಕರು, ಸಚಿವರು ಸಿಎಂ ಸಿದ್ದರಾಮಯ್ಯ ಮಧ್ಯ ಪ್ರವೇಶ ಮಾಡುತ್ತಿದ್ದಂತೆ ತಣ್ಣಗಾಗಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರದಲ್ಲಿ ಬಲಗೈ ಸಮುದಾಯಕ್ಕೆ ಆದ್ಯತೆ ನೀಡಬೇಕೆಂಬ ಬೇಡಿಕೆಯಿಂದ ರಮೇಶ್ ಕುಮಾರ್ ಬಣ ಹಿಂದೆ ಸರಿದಿದೆ ಎನ್ನಲಾಗುತ್ತಿದೆ. ಆದರೆ ಸಚಿವ ಕೆಎಚ್ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಹೊರತಾಗಿ ಬೇರೆ ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಬಹುದು ಎಂದು ಷರತ್ತು ಹಾಕಿದ್ದಾರೆ. ಇದರೊಂದಿಗೆ ರಾಜ್ಯಸಭೆ ಪುನರಾಯ್ಕೆ ಅವಕಾಶ ವಂಚಿತರಾದ ಎಲ್.ಹನುಮಂತಯ್ಯ ಅವರಿಗೆ ಅದೃಷ್ಟ ಒಲಿಯುವ ನಿರೀಕ್ಷೆಯಿದೆ.
ಸಚಿವ ಮುನಿಯಪ್ಪ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ ತನ್ನ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ಫೈನಲ್ ಮಾಡಿಸಿದ್ದಾರೆ ಎಂದು ಆಕ್ರೋಶಗೊಂಡಿದ್ದ ಸಚಿವ ಡಾ.ಎಂ.ಸಿ.ಸುಧಾಕರ್, ಮೇಲ್ಮನೆ ಸದಸ್ಯರಾದ ನಜೀರ್ ಅಹ್ಮದ್, ಅನಿಲ್ ಕುಮಾರ್, ಶಾಸಕರಾದ ಕೆವೈ ನಂಜೇಗೌಡ, ಕೊತ್ತೂರು ಮಂಜುನಾಥ್ ಬುದವಾರ ರಾಜಿನಾಮೆ ನೀಡುವುದಾಗಿ ಹೇಳಿ ಹೈಡ್ರಾಮಾ ನಡೆಸಿದ್ದರು. ಇದರ ಬೆನ್ನಲ್ಲೇ ಗುರುವಾರ ಬೆಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೊಂದಿಗೆ ಅತೃಪ್ತ ಶಾಸಕರು ಸಭೆ ನಡೆಸಿದರು. ಸಂಧಾನ ಮಾತುಕತೆ ಬಹುತೇಕ ಫಲ ಕೊಟ್ಟಿದೆ ಎನ್ನಲಾಗುತ್ತಿದ್ದು, ಹೈಕಮಾಂಡ್ ನಿರ್ಧರಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದಿದ್ದಾರೆ.
ಮುನಿಯಪ್ಪ ಕುಟುಂಬದ ಹೊರತಾಗಿ ಯಾರಿಗೆ ಟಿಕೆಟ್ ಕೊಟ್ಟರು ನಮ್ಮ ಸಮ್ಮತಿಯಿದೆ ಎಂಬ ರಮೇಶ್ ಕುಮಾರ್ ಬಣದ ಅಭಿಪ್ರಾಯವನ್ನು ಹೈಕಮಾಂಡ್ ಗಮನಕ್ಕೆ ತರುವುದಾಗಿವ ಸಿಎಂ ಮತ್ತು ಡಿಕೆಶಿ ಸಭೆಯಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಮುನಿಯಪ್ಪ ವಿರೋಧಿ ಬಣ ತಮ್ಮ ಪಟ್ಟು ಯಶಸ್ಸು ಕಂಡ ಖುಷಿಯಲ್ಲಿದ್ದಾರೆ.
L hanumanthaiah mostly to get ticket from kolar after cm siddaramaiah intervenes. A day after five Congress legislators threatened to resign over fielding Food and Civil Supplies Minister K H Muniyappa’s son-in-law Chikka Peddanna from the Kolar Lok Sabha constituency, the disgruntled group agreed to set aside their differences and back the candidate fielded by the party.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm