ಬ್ರೇಕಿಂಗ್ ನ್ಯೂಸ್
30-03-24 09:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.30: ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಅವರು ದಿಢೀರ್ ಬೆಳವಣಿಗೆಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಧೀರಜ್ ಪ್ರಸಾದ್ ಅವರು ಪಕ್ಷ ಸೇರಿದ್ದಾರೆ. ಬಿಜೆಪಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಕುಟುಂಬದ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.
ಬಿಜೆಪಿ ಚಾಮರಾಜನಗರದಿಂದ ಮಾಜಿ ಶಾಸಕ ಬಾಲರಾಜ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ತನ್ನ ಪುತ್ರ ಅಥವಾ ಅಳಿಯನಿಗೆ ಟಿಕೆಟ್ ನೀಡುವಂತೆ ಶ್ರೀನಿವಾಸ ಪ್ರಸಾದ್ ಲಾಬಿ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಹಾಲಿ ಸಂಸದರ ಮಾತಿಗೆ ಮನ್ನಣೆ ನೀಡಿರಲಿಲ್ಲ. ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರೀಗ ಯಾರನ್ನು ಬೆಂಬಲಿಸುತ್ತಾರೆ ಎನ್ನುವ ಕುತೂಹಲ ಇದೆ.
ಎರಡು ದಿನಗಳ ಹಿಂದಷ್ಟೇ ಸಚಿವ ಎಚ್.ಟಿ ಮಹದೇವಪ್ಪ ಅವರು ತನ್ನ ಬೆಂಬಲಿಗರ ಜೊತೆಗೆ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿದ್ದರು. ಆಮೂಲಕ ತನಗೇನೂ ಅವರ ಜೊತೆ ವೈಮನಸ್ಸು ಇಲ್ಲ ಎನ್ನುವ ಸಂದೇಶ ಸಾರಿದ್ದರು. ಇದೀಗ ಸಂಸದರ ಅಳಿಯನೇ ಬಿಜೆಪಿಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರಿರುವುದು ಪಕ್ಷದಲ್ಲಿ ತಳಮಳ ಸೃಷ್ಟಿಯಾಗಿದೆ.
In a sudden development, Dheeraj Prasad, son-in-law of MP Srinivas Prasad, who was aspirant for BJP ticket from Chamarajanagar SC reserved Lok Sabha seat, joined the Congress in the presence of KPCC president DK Shivakumar on Friday.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm