ಬ್ರೇಕಿಂಗ್ ನ್ಯೂಸ್
30-03-24 09:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.30: ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಅವರು ದಿಢೀರ್ ಬೆಳವಣಿಗೆಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಧೀರಜ್ ಪ್ರಸಾದ್ ಅವರು ಪಕ್ಷ ಸೇರಿದ್ದಾರೆ. ಬಿಜೆಪಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಕುಟುಂಬದ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.
ಬಿಜೆಪಿ ಚಾಮರಾಜನಗರದಿಂದ ಮಾಜಿ ಶಾಸಕ ಬಾಲರಾಜ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ತನ್ನ ಪುತ್ರ ಅಥವಾ ಅಳಿಯನಿಗೆ ಟಿಕೆಟ್ ನೀಡುವಂತೆ ಶ್ರೀನಿವಾಸ ಪ್ರಸಾದ್ ಲಾಬಿ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಹಾಲಿ ಸಂಸದರ ಮಾತಿಗೆ ಮನ್ನಣೆ ನೀಡಿರಲಿಲ್ಲ. ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರೀಗ ಯಾರನ್ನು ಬೆಂಬಲಿಸುತ್ತಾರೆ ಎನ್ನುವ ಕುತೂಹಲ ಇದೆ.
ಎರಡು ದಿನಗಳ ಹಿಂದಷ್ಟೇ ಸಚಿವ ಎಚ್.ಟಿ ಮಹದೇವಪ್ಪ ಅವರು ತನ್ನ ಬೆಂಬಲಿಗರ ಜೊತೆಗೆ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿದ್ದರು. ಆಮೂಲಕ ತನಗೇನೂ ಅವರ ಜೊತೆ ವೈಮನಸ್ಸು ಇಲ್ಲ ಎನ್ನುವ ಸಂದೇಶ ಸಾರಿದ್ದರು. ಇದೀಗ ಸಂಸದರ ಅಳಿಯನೇ ಬಿಜೆಪಿಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರಿರುವುದು ಪಕ್ಷದಲ್ಲಿ ತಳಮಳ ಸೃಷ್ಟಿಯಾಗಿದೆ.
In a sudden development, Dheeraj Prasad, son-in-law of MP Srinivas Prasad, who was aspirant for BJP ticket from Chamarajanagar SC reserved Lok Sabha seat, joined the Congress in the presence of KPCC president DK Shivakumar on Friday.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am