ಬ್ರೇಕಿಂಗ್ ನ್ಯೂಸ್
30-03-24 09:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.30: ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಅವರು ದಿಢೀರ್ ಬೆಳವಣಿಗೆಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಧೀರಜ್ ಪ್ರಸಾದ್ ಅವರು ಪಕ್ಷ ಸೇರಿದ್ದಾರೆ. ಬಿಜೆಪಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಕುಟುಂಬದ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.
ಬಿಜೆಪಿ ಚಾಮರಾಜನಗರದಿಂದ ಮಾಜಿ ಶಾಸಕ ಬಾಲರಾಜ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ತನ್ನ ಪುತ್ರ ಅಥವಾ ಅಳಿಯನಿಗೆ ಟಿಕೆಟ್ ನೀಡುವಂತೆ ಶ್ರೀನಿವಾಸ ಪ್ರಸಾದ್ ಲಾಬಿ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಹಾಲಿ ಸಂಸದರ ಮಾತಿಗೆ ಮನ್ನಣೆ ನೀಡಿರಲಿಲ್ಲ. ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರೀಗ ಯಾರನ್ನು ಬೆಂಬಲಿಸುತ್ತಾರೆ ಎನ್ನುವ ಕುತೂಹಲ ಇದೆ.
ಎರಡು ದಿನಗಳ ಹಿಂದಷ್ಟೇ ಸಚಿವ ಎಚ್.ಟಿ ಮಹದೇವಪ್ಪ ಅವರು ತನ್ನ ಬೆಂಬಲಿಗರ ಜೊತೆಗೆ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿದ್ದರು. ಆಮೂಲಕ ತನಗೇನೂ ಅವರ ಜೊತೆ ವೈಮನಸ್ಸು ಇಲ್ಲ ಎನ್ನುವ ಸಂದೇಶ ಸಾರಿದ್ದರು. ಇದೀಗ ಸಂಸದರ ಅಳಿಯನೇ ಬಿಜೆಪಿಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರಿರುವುದು ಪಕ್ಷದಲ್ಲಿ ತಳಮಳ ಸೃಷ್ಟಿಯಾಗಿದೆ.
In a sudden development, Dheeraj Prasad, son-in-law of MP Srinivas Prasad, who was aspirant for BJP ticket from Chamarajanagar SC reserved Lok Sabha seat, joined the Congress in the presence of KPCC president DK Shivakumar on Friday.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm