ಬ್ರೇಕಿಂಗ್ ನ್ಯೂಸ್
01-04-24 10:10 pm Bangalore Correspondent ಕರ್ನಾಟಕ
ಬೆಂಗಳೂರು, ಏ 01: ಹೆಚ್.ಡಿ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತಕೊಡಿ ಎಂದು ಮನವಿ ಮಾಡಿದರು.
ಮಂಡ್ಯ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಕಳೆದ ಬಾರಿ ಮೈತ್ರಿಯಂತೆ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಹೋಗಿದ್ದಾರೆ ಎಂದರು.
ಕುಮಾರಸ್ವಾಮಿ ಹಾಸನದಿಂದ ರಾಮನಗರಕ್ಕೆ ಬಂದಿದ್ದರು. ಇದೀಗ ಮಂಡ್ಯಕ್ಕೆ ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು, ಮಾಡಲಿ. ಬೆಂಗಳೂರು ಗ್ರಾಮಾಂತರದಲ್ಲಿ ಭಾವನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಎಲ್ಲಾ ಕಡೆ ನೀವೇ ನಿಂತರೆ ಕಾರ್ಯಕರ್ತರು ಏನು ಮಾಡುತ್ತಾರೆ ಎಂದು ಡಿಕೆ ಪ್ರಶ್ನಿಸಿದರು.
ಇದಕ್ಕೂ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್, ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ʼವಿಷʼ ಹೇಳಿಕೆ ನೀಡಿದ್ದೇನೆ. ಕುಂಬಳಕಾಯಿ ಕಳ್ಳ ಎಂದರೆ ಸುಮಲತಾ ಅವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು? ನಾನು ಸುಮಲತಾ ಅವರ ಸುದ್ದಿಗೆ ಹೋಗಿಲ್ಲ, ಅವರ ಸುದ್ದಿ ನನಗೆ ಅವಶ್ಯಕತೆ ಇಲ್ಲ. ಅಂಬರೀಷ್ ಅವರಿಗೆ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಅವರು ಕೊನೆಯುಸಿರು ಬಿಡುವ ವೇಳೆಯಲ್ಲಿ ಏನು ಹೇಳಿದರು ಎಂಬುದು ಗೊತ್ತಿದೆ. ನಾವು ಈಗ ಆ ವಿಚಾರಗಳನ್ನು ಮಾತನಾಡುವುದಿಲ್ಲ.
ನಾನು ಸುಮಲತಾ ಅವರ ವಿಚಾರಕ್ಕೆ ಇಂದು ಹೋಗಲ್ಲ, ನಾಳೆಯೂ ಹೋಗಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಅವರ ಬಗ್ಗೆ ನಾನೇಕೆ ತಲೆ ಕೆಡಿಸಿಕೊಳ್ಳಬೇಕು. ಪಕ್ಷದ ಸಿದ್ಧಾಂತದ ಬಗ್ಗೆ ಮಾತನಾಡಲಿ, ಉತ್ತರ ಕೊಡುತ್ತೇನೆ. ಅವರು ಪಕ್ಷದ ಸಿದ್ಧಾಂತದಿಂದ ಹೊರಗೆ ಬರಲಿ, ಆನಂತರ ಮಾತನಾಡುವʼ ಎಂದರು.
Mandya politics is a shame says DK Shivakumar, Hd Kumaraswamy is just like dead. He was talking against BJP party and now he's joined hands with them.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm