ಬ್ರೇಕಿಂಗ್ ನ್ಯೂಸ್
01-04-24 10:10 pm Bangalore Correspondent ಕರ್ನಾಟಕ
ಬೆಂಗಳೂರು, ಏ 01: ಹೆಚ್.ಡಿ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತಕೊಡಿ ಎಂದು ಮನವಿ ಮಾಡಿದರು.
ಮಂಡ್ಯ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಕಳೆದ ಬಾರಿ ಮೈತ್ರಿಯಂತೆ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಹೋಗಿದ್ದಾರೆ ಎಂದರು.
ಕುಮಾರಸ್ವಾಮಿ ಹಾಸನದಿಂದ ರಾಮನಗರಕ್ಕೆ ಬಂದಿದ್ದರು. ಇದೀಗ ಮಂಡ್ಯಕ್ಕೆ ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು, ಮಾಡಲಿ. ಬೆಂಗಳೂರು ಗ್ರಾಮಾಂತರದಲ್ಲಿ ಭಾವನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಎಲ್ಲಾ ಕಡೆ ನೀವೇ ನಿಂತರೆ ಕಾರ್ಯಕರ್ತರು ಏನು ಮಾಡುತ್ತಾರೆ ಎಂದು ಡಿಕೆ ಪ್ರಶ್ನಿಸಿದರು.
ಇದಕ್ಕೂ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್, ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ʼವಿಷʼ ಹೇಳಿಕೆ ನೀಡಿದ್ದೇನೆ. ಕುಂಬಳಕಾಯಿ ಕಳ್ಳ ಎಂದರೆ ಸುಮಲತಾ ಅವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು? ನಾನು ಸುಮಲತಾ ಅವರ ಸುದ್ದಿಗೆ ಹೋಗಿಲ್ಲ, ಅವರ ಸುದ್ದಿ ನನಗೆ ಅವಶ್ಯಕತೆ ಇಲ್ಲ. ಅಂಬರೀಷ್ ಅವರಿಗೆ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಅವರು ಕೊನೆಯುಸಿರು ಬಿಡುವ ವೇಳೆಯಲ್ಲಿ ಏನು ಹೇಳಿದರು ಎಂಬುದು ಗೊತ್ತಿದೆ. ನಾವು ಈಗ ಆ ವಿಚಾರಗಳನ್ನು ಮಾತನಾಡುವುದಿಲ್ಲ.
ನಾನು ಸುಮಲತಾ ಅವರ ವಿಚಾರಕ್ಕೆ ಇಂದು ಹೋಗಲ್ಲ, ನಾಳೆಯೂ ಹೋಗಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಅವರ ಬಗ್ಗೆ ನಾನೇಕೆ ತಲೆ ಕೆಡಿಸಿಕೊಳ್ಳಬೇಕು. ಪಕ್ಷದ ಸಿದ್ಧಾಂತದ ಬಗ್ಗೆ ಮಾತನಾಡಲಿ, ಉತ್ತರ ಕೊಡುತ್ತೇನೆ. ಅವರು ಪಕ್ಷದ ಸಿದ್ಧಾಂತದಿಂದ ಹೊರಗೆ ಬರಲಿ, ಆನಂತರ ಮಾತನಾಡುವʼ ಎಂದರು.
Mandya politics is a shame says DK Shivakumar, Hd Kumaraswamy is just like dead. He was talking against BJP party and now he's joined hands with them.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm