ಬ್ರೇಕಿಂಗ್ ನ್ಯೂಸ್
02-04-24 11:07 am HK News Desk ಕರ್ನಾಟಕ
ಚಾಮರಾಜನಗರ, ಏ 02: ಕಾರ್ಯಕರ್ತರ ಸಭೆಯಲ್ಲಿ ಅಮಿತ್ ಶಾ ಗೂಂಡಾ, ರೌಡಿ ಎಂದು ಹೇಳಿಕೆ ನೀಡಿದ ಸಂಬಂಧ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಶಿಲ್ಪಾನಾಗ್ ನೋಟಿಸ್ ಜಾರಿ ಮಾಡಿದ್ದಾರೆ.
ಸಹಾಯಕ ಚುನಾವಣಾಧಿಕಾರಿ, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಂದ ವರದಿ ಪಡೆದಿರುವ ಜಿಲ್ಲಾ ಚುನಾವಣಾಧಿಕಾರಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿರುವ ಹೇಳಿಕೆಗೆ ವಿವರಣೆ ನೀಡುವಂತೆ ಯತೀಂದ್ರಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಕಳೆದ 28 ರಂದು ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಯತೀಂದ್ರ ತಮ್ಮ ಭಾಷಣದಲ್ಲಿ 'ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕೊಲೆ ಪ್ರಕರಣ ಆರೋಪ ಇದೆ. ಕೊಲೆ ಆರೋಪದಲ್ಲಿ ಗುಜರಾತ್ನಲ್ಲಿ ಗಡಿಪಾರು ಕೂಡ ಆಗಿದ್ದರು. ಬಿಜೆಪಿ ಸರ್ಕಾರದಲ್ಲಿ ಉನ್ನತ ಸ್ಥಾನದಲ್ಲಿರುವವರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿವೆ. ಇಂಥವರ ಕೈಯಲ್ಲಿ ಅಧಿಕಾರ ಸಿಕ್ಕರೆ ದೇಶದ ಸ್ಥಿತಿ ಏನಾಗುತ್ತದೆ ಎಂಬುದನ್ನು ಈ 10 ವರ್ಷಗಳಲ್ಲಿ ನೋಡಿದ್ದೇವೆ. ಇಂತವರನ್ನ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ' ಎಂದು ದೂರಿದ್ದರು.
ಅಮಿತ್ ಶಾ ವಿರುದ್ಧ ಹೇಳಿಕೆ ನೀಡಿರುವ ಸಂಬಂಧ ಯತೀಂದ್ರ ವಿರುದ್ಧ ಬಿಜೆಪಿ ಬೆಂಗಳೂರಲ್ಲಿ ದೂರು ದಾಖಲು ಮಾಡಿತ್ತು. ಈ ಹಿನ್ನೆಲೆಯಲ್ಲಿ ಯತೀಂದ್ರಗೆ ಚಾಮರಾಜನಗರ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದ್ದಾರೆ.
ಚುನಾವಣಾಧಿಕಾರಿಯ ನೋಟಿಸ್ ಕುರಿತು ಯತೀದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. 'ನೋಟಿಸ್ ಬಂದಿದೆ. ಇದಕ್ಕೆ ಸರಿಯಾದ ರೀತಿಯಲ್ಲಿ ಉತ್ತರಿಸುತ್ತೇನೆ. ನಾನು ಅಮಿತ್ ಶಾ ಅವರ ವಿರುದ್ಧ ನೀಡಿರುವ ಹೇಳಿಕೆ ವೈಯಕ್ತಿಕವಾದದಲ್ಲ. ಸಿಬಿಐನವರು ಹೇಳಿರುವುದನ್ನೇ ಪುನರುಚ್ಛರಿಸಿದ್ದೇನೆ. ಬಿಜೆಪಿಯವರು ನನ್ನ ಮೇಲೆ ಕೋಪ ಮಾಡಿಕೊಳ್ಳುವ ಮುನ್ನ ಸಿಬಿಐ ಮೇಲೆ ಕೋಪಿಸಿಕೊಳ್ಳಬೇಕು' ಎಂದು ಬಿಜೆಪಿಗೆ ಯತೀಂದ್ರ ತಿರುಗೇಟು ನೀಡಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತ್ರಿಕ್ರಿಯಿಸಿದ್ದು, ಕೋರ್ಟ್ಗೆ ಸಿಬಿಐ ನೀಡಿರುವ ವರದಿ ಆಧರಿಸಿ ಯತೀಂದ್ರ ಹೇಳಿಕೆ ನೀಡಿದ್ದಾನೆಯೇ ಹೊರತು ಅಮಿತ್ ಶಾ ಅವರನ್ನು ಅವಮಾನ ಮಾಡಲು ಹೇಳಿಕೆ ನೀಡಿಲ್ಲ' ಎಂದು ಪುತ್ರನ ಹೇಳಿಕೆಯನ್ನು ಮೈಸೂರಲ್ಲಿ ಸಮರ್ಥಿಸಿಕೊಂಡಿದ್ದರು.
Yathindra Siddaramaiah gets notice from election officer for slamming Amit shah, responding to the notice Yathindra says I have nothing personal but have made statement based on CBI Report he added.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm