ಬ್ರೇಕಿಂಗ್ ನ್ಯೂಸ್
03-04-24 02:46 pm HK News Desk ಕರ್ನಾಟಕ
ಮಂಡ್ಯ, ಎ.3: ಸಕ್ಕರೆ ನಾಡು ಮಂಡ್ಯ ಬಿಟ್ಟು ಬೇರೆ ಕಡೆ ನನ್ನ ರಾಜಕೀಯ ಜೀವನ ಇರೋದಿಲ್ಲ, ಮಂಡ್ಯ ಮಣ್ಣಿನ ಸೊಸೆಯಾಗಿ ಜಿಲ್ಲೆಯ ಜನರ ಕೈಬಿಟ್ಟು ಬೇರೆಲ್ಲೂ ಹೋಗೋದಿಲ್ಲ. ಈ ಮಂಡ್ಯದ ಋಣ ಮತ್ತು ಈ ಮಂಡ್ಯದ ಜನವನ್ನು ನಾನು ಎಂದೆಂದಿಗೂ ಬಿಡುವುದಿಲ್ಲ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಸಂಸದೆ ಸುಮಲತಾ ಪುನರುಚ್ಛರಿಸಿದ್ದಾರೆ.
ಮಂಡ್ಯದಲ್ಲಿ ಬೆಂಬಲಿಗರ ಬಹಿರಂಗ ಸಮಾವೇಶದಲ್ಲಿ ಭಾವಪರವಶರಾಗಿ ಮಾತನಾಡಿದ ಅವರು, ಮಂಡ್ಯದ ಜಿಲ್ಲೆಯ ಜನ ನನಗೆ ತಾಯಿ ಸ್ಥಾನ ನೀಡಿದ್ದೀರಿ, ಈ ತಾಯಿಯನ್ನು ಮಕ್ಕಳಿಂದ ದೂರ ಮಾಡಲು ಎಂದಿಗೂ ಸಾಧ್ಯವಿಲ್ಲ ಎಂದರು.
ಪಕ್ಷೇತರ ಸ್ಪರ್ಧಿಸುವುದಿಲ್ಲ
ಹಠಕ್ಕೆ ಬಿದ್ದು ಈ ಹೊತ್ತಿನಲ್ಲಿ ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನನ್ನ ಬೆಂಬಲ ನೀಡುತ್ತೇನೆ. ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ದೇಶ ಪರ ಕಾಳಜಿ, ಕೆಲಸಗಳನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ರಾಷ್ಟ್ರ ಮಟ್ಟದ ಪಕ್ಷವೊಂದು ನನ್ನ ಬೆಂಬಲಕ್ಕೆ ಇದ್ದಾಗ ಮುಂದಿನ ದಿನಗಳಲ್ಲಿ ನಾನು ಯಾವ ರೀತಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇನೆಂದು ನೀವೆಲ್ಲಾ ನೋಡುತ್ತೀರಿ ಎಂದು ಮಂಡ್ಯ ಜನತೆಗೆ ಆಶ್ವಾಸನೆ ನೀಡಿದರು.
ನಾನು ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ರಿ. ನನಗೆ ಐತಿಹಾಸಿಕ ಗೆಲುವು ಕೊಡುಗೆಯಾಗಿ ಕೊಟ್ಟಿದ್ದೀರಿ. ಐದು ವರ್ಷಗಳಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ವಂದನೆಗಳು. ಜನಸಾಮಾನ್ಯರ ಸಮಸ್ಯೆಗಳ ಪರ ನಾನು ನಿಂತಿದ್ದೇನೆ. ಜಿಲ್ಲೆಯ ಅಭಿವೃದ್ಧಿ ಮಾಡುವುದಷ್ಟೇ ನನ್ನ ಮನಸ್ಸಿನಲ್ಲಿದ್ದಿದ್ದು. ಕೆಆರ್ಎಸ್ ಡ್ಯಾಂ ಸಂರಕ್ಷಣೆ, ಅಕ್ರಮ ಗಣಿಗಾರಿಕೆ ವಿರುದ್ಧ ಯುದ್ಧವನ್ನೇ ಮಾಡಿದ್ದೇನೆ. ಮೈಷುಗರ್ ಕಾರ್ಖಾನೆಗಾಗಿ ಎರಡು ವರ್ಷ ಹೋರಾಡಿದ್ದೇನೆ ಎಂದು ತಿಳಿಸಿದರು.
2019ರಲ್ಲಿ ಅದೊಂದು ಬೇರೆ ತರಹದ ಸವಾಲಾಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಿಸುತ್ತಿದ್ದೇನೆ. ಕೊನೆ ಗಳಿಗೆವರೆಗೂ ಬಿಜೆಪಿ ಟಿಕೆಟ್ ಉಳಿಸಿಕೊಳ್ಳಲು ಹೋರಾಟ ಮಾಡಿದೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ನಿಲ್ಲುವಂತೆ ಹೇಳಿದರು. ನನಗೆ ಬೇರೆ ಬೇರೆ ಕ್ಷೇತ್ರದ ಆಫರ್ ನೀಡಿದರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಗೆದ್ದರೂ ಸೋತರು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದು ಹಿರಿಯ ನಾಯಕರಿಗೆ ತಿಳಿಸಿದ್ದೇನೆ ಎಂದರು.
Incumbent Mandya MP Sumalatha Ambareesh, who won as an independent in 2019 elections, announced her decision to join the BJP and not contest the 2024 elections. This has brought an end to the suspense over her next move which kept both the BJP and the Janata Dal (Secular) on tenterhooks as the two have entered into a pre-poll alliance with the BJP supporting the JD(S) candidate H.D. Kumaraswamy who is contesting from Mandya.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 01:05 pm
Udupi Correspondent
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
02-09-25 11:22 am
Mangalore Correspondent
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm