ಬ್ರೇಕಿಂಗ್ ನ್ಯೂಸ್
05-04-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 05: ನಟಿ ಕಮ್ ಮಂಡ್ಯದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಕೂಡ ಉಪಸ್ಥಿತರಿದ್ದರು.




ಬಿಜೆಪಿ ಸೇರ್ಪಡೆಯಾಗುವ ಮುನ್ನ ಅಂಬರೀಷ್ ಸಮಾದಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದರು, ಪತ್ರ ಅಭಿಷೇಕ್ ಅಂಬರೀಷ್ ಮತ್ತುನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಜೊತೆಯಲ್ಲಿದ್ದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದ ಸುಮಲತಾ, ಬಿಜೆಪಿಗೆ ಸೇರುವುದಾಗಿ ಘೋಷಣೆ ಮಾಡಿದ್ದರು. ಬುಧವಾರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ್ದ ಅವರು, ಟಿಕೆಟ್ ಸಿಗದಿದ್ದರೆ ಹಲವು ರಾಜಕಾರಣಿಗಳು ಪಕ್ಷ ಬದಲಾಯಿಸುತ್ತಾರೆ. ಆದರೆ, ನಾನು ಟಿಕೆಟ್ ಬಿಟ್ಟುಕೊಟ್ಟು ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದ್ದರು.
ಬಿಜೆಪಿ ಸೇರಿದ ನಂತರ ಮಾತನಾಡಿದ ಸುಮಲತಾ, ಬಿಜೆಪಿ ಸೇರ್ಪಡೆ ನನ್ನ ಉತ್ತಮ ಆಯ್ಕೆ ಎನಿಸಿತ್ತು, ಬೊಮ್ಮಾಯಿ ನನಗೆ 50 ಕೋಟಿ ರು. ಅನುದಾನ ನೀಡಿದ್ದರು, ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನನ್ನ ಪರ ಪ್ರತಾರ ಮಾಡಿದ್ದನ್ನು ಮರೆಯಲಾಗದು, ಮಂಡ್ಯ ಜಿಲ್ಲೆಗೆ ಅಭಿವೃದ್ಧಿಗೆ ಕೊಟ್ಟ ಕೊಡುಗೆ ಬಿಜೆಪಿಗೆ ಸೇರಬೇಕು ಎಂದರು. ಬಿಜೆಪಿ ಸೇರ್ಪಡೆಗೂ ಮುನ್ನ ಸುಮಲತಾ ಅಂಬರೀಶ್ ಅವರು, “ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದಿದ್ದರು
ಮಂಡ್ಯದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನಡೆ ಉಂಟು ಮಾಡಿದೆ. ಎನ್ ಡಿ ಎ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಸುಮಲತಾ 2019 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿ ಸ್ವತಂತ್ರವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದರು, ಮಂಡ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುಮಲತಾ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು.
Actor-turned-politician and independent MP from Mandya in Karnataka Sumalatha Ambareesh on Friday joined the BJP. Veteran BJP leader B S Yediyurappa, state President B Y Vijayendra, Leader of Opposition in the state Assembly R Ashoka, national General Secretary in-charge of elections in Karnataka Radha Mohan Das Agarwal and former Chief Minister D V Sadananda Gowda were among those
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm