ಬ್ರೇಕಿಂಗ್ ನ್ಯೂಸ್
05-04-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 05: ನಟಿ ಕಮ್ ಮಂಡ್ಯದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಕೂಡ ಉಪಸ್ಥಿತರಿದ್ದರು.




ಬಿಜೆಪಿ ಸೇರ್ಪಡೆಯಾಗುವ ಮುನ್ನ ಅಂಬರೀಷ್ ಸಮಾದಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದರು, ಪತ್ರ ಅಭಿಷೇಕ್ ಅಂಬರೀಷ್ ಮತ್ತುನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಜೊತೆಯಲ್ಲಿದ್ದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದ ಸುಮಲತಾ, ಬಿಜೆಪಿಗೆ ಸೇರುವುದಾಗಿ ಘೋಷಣೆ ಮಾಡಿದ್ದರು. ಬುಧವಾರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ್ದ ಅವರು, ಟಿಕೆಟ್ ಸಿಗದಿದ್ದರೆ ಹಲವು ರಾಜಕಾರಣಿಗಳು ಪಕ್ಷ ಬದಲಾಯಿಸುತ್ತಾರೆ. ಆದರೆ, ನಾನು ಟಿಕೆಟ್ ಬಿಟ್ಟುಕೊಟ್ಟು ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದ್ದರು.
ಬಿಜೆಪಿ ಸೇರಿದ ನಂತರ ಮಾತನಾಡಿದ ಸುಮಲತಾ, ಬಿಜೆಪಿ ಸೇರ್ಪಡೆ ನನ್ನ ಉತ್ತಮ ಆಯ್ಕೆ ಎನಿಸಿತ್ತು, ಬೊಮ್ಮಾಯಿ ನನಗೆ 50 ಕೋಟಿ ರು. ಅನುದಾನ ನೀಡಿದ್ದರು, ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನನ್ನ ಪರ ಪ್ರತಾರ ಮಾಡಿದ್ದನ್ನು ಮರೆಯಲಾಗದು, ಮಂಡ್ಯ ಜಿಲ್ಲೆಗೆ ಅಭಿವೃದ್ಧಿಗೆ ಕೊಟ್ಟ ಕೊಡುಗೆ ಬಿಜೆಪಿಗೆ ಸೇರಬೇಕು ಎಂದರು. ಬಿಜೆಪಿ ಸೇರ್ಪಡೆಗೂ ಮುನ್ನ ಸುಮಲತಾ ಅಂಬರೀಶ್ ಅವರು, “ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದಿದ್ದರು
ಮಂಡ್ಯದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಿನ್ನಡೆ ಉಂಟು ಮಾಡಿದೆ. ಎನ್ ಡಿ ಎ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅವರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಸುಮಲತಾ 2019 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿ ಸ್ವತಂತ್ರವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದರು, ಮಂಡ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುಮಲತಾ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು.
Actor-turned-politician and independent MP from Mandya in Karnataka Sumalatha Ambareesh on Friday joined the BJP. Veteran BJP leader B S Yediyurappa, state President B Y Vijayendra, Leader of Opposition in the state Assembly R Ashoka, national General Secretary in-charge of elections in Karnataka Radha Mohan Das Agarwal and former Chief Minister D V Sadananda Gowda were among those
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm