ಬ್ರೇಕಿಂಗ್ ನ್ಯೂಸ್
30-11-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ನ.30: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ ಮಾಡಲಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 22 ಮತ್ತು 27 ರಂದು ಚುನಾವಣೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ನಡೆದರೆ, ಡಿ. 27ರಂದು ಉಳಿದ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45,128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಂದಿನಿಂದಲೇ (ನ.30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜಕೀಯ ಪಕ್ಷಗಳಿಂದ ಸಿದ್ಧತೆ
ಗ್ರಾಮ ಪಂಚಾಯತ್ ಚುನಾವಣೆಗೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಸಿದ್ಧತೆ ನಡೆಸಿವೆ. ರಾಜ್ಯದೆಲ್ಲೆಡೆ ಮೊದಲ ಹಂತದ ಸಮಾವೇಶಗಳನ್ನು ಆರಂಭಿಸಿ ಜನರನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಪಂಚಾಯತ್ ಅಖಾಡಕ್ಕೆ ಧುಮುಕಿದೆ.
ಬಿಜೆಪಿಯಲ್ಲಿ ಗ್ರಾಪಂ ಚುನಾವಣೆಗೆ ಇಬ್ಬರು ಡಿಸಿಎಂ ಸೇರಿ ಐವರು ಸಚಿವರಿಗೆ ಪಕ್ಷದಿಂದ ಜವಾಬ್ದಾರಿ ವಹಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಸಮಾವೇಶಗಳನ್ನು ನಡೆಸಲು ಆರಂಭಿಸಿದೆ.
The Karnataka State Election Commission has announced the Gram Panchayat election date as on December 22nd and 27th of 2020.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm