ಬ್ರೇಕಿಂಗ್ ನ್ಯೂಸ್
30-11-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ನ.30: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ ಮಾಡಲಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 22 ಮತ್ತು 27 ರಂದು ಚುನಾವಣೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ನಡೆದರೆ, ಡಿ. 27ರಂದು ಉಳಿದ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45,128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಂದಿನಿಂದಲೇ (ನ.30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.


ರಾಜಕೀಯ ಪಕ್ಷಗಳಿಂದ ಸಿದ್ಧತೆ
ಗ್ರಾಮ ಪಂಚಾಯತ್ ಚುನಾವಣೆಗೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಸಿದ್ಧತೆ ನಡೆಸಿವೆ. ರಾಜ್ಯದೆಲ್ಲೆಡೆ ಮೊದಲ ಹಂತದ ಸಮಾವೇಶಗಳನ್ನು ಆರಂಭಿಸಿ ಜನರನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಪಂಚಾಯತ್ ಅಖಾಡಕ್ಕೆ ಧುಮುಕಿದೆ.

ಬಿಜೆಪಿಯಲ್ಲಿ ಗ್ರಾಪಂ ಚುನಾವಣೆಗೆ ಇಬ್ಬರು ಡಿಸಿಎಂ ಸೇರಿ ಐವರು ಸಚಿವರಿಗೆ ಪಕ್ಷದಿಂದ ಜವಾಬ್ದಾರಿ ವಹಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಸಮಾವೇಶಗಳನ್ನು ನಡೆಸಲು ಆರಂಭಿಸಿದೆ.
The Karnataka State Election Commission has announced the Gram Panchayat election date as on December 22nd and 27th of 2020.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm