ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.

ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm