ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.

ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm