ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.
ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm