ಬ್ರೇಕಿಂಗ್ ನ್ಯೂಸ್
30-11-20 12:47 pm Headline Karnataka News Network ಕರ್ನಾಟಕ
ಕಾರವಾರ, ನ.30 : ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ... ಹೀಗೆಂದು ಹೇಳಿದ್ದು ಜೆಡಿಎಸ್ ಹಿರಿಯ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ.
ಕಾರವಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು.. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಂದ್ರೆ ಜೇನುಗೂಡಿಗೆ ಕೈಇಟ್ಟಂತೆ. ಅದನ್ನು ಮಾಡಲು ಹೋಗುತ್ತಾರೆಯೇ ? ಅಪಾಯ ಮೈಮೇಲೆಳೆದುಕೊಳ್ಳಲು ತಯಾರಿದ್ದಾರೆಯೇ ಎಂದು ಮರು ಪ್ರಶ್ನೆ ಹಾಕಿದರು.

ಸಿಎಂ ಬದಲಾವಣೆಗೆ ಸ್ವಾಮೀಜಿಗಳ ಒತ್ತಡ ಹಾಕಿದ್ದಾರಂತೆ ಎಂಬ ಪ್ರಶ್ನೆಗೆ, ಈ ಸ್ವಾಮೀಜಿಗಳಿಗೆ ರಾಜಕೀಯ ಯಾಕೆ ಬೇಕು ? ರಾಜಕೀಯ ಬೇಕೆಂದರೆ ನಮ್ಮಂತೆ ಸಕ್ರಿಯ ರಾಜಕಾರಣಕ್ಕೇ ಬರಲಿ. ಹಿಂದೆ ನಿಂತು ಗುಂಡು ತೂರುವುದು ಸರಿಯಲ್ಲ. ಸ್ವಾಮೀಜಿಗಳು ಮಾಡುತ್ತಿರುವುದು ಎಳ್ಳಷ್ಟೂ ಸರಿಯಿಲ್ಲ. ಇವರೇ ಜಾತಿ ರಾಜಕಾರಣ ಹಬ್ಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಲಿಂಗಾಯತ ಪರ ಹೋರಾಟ ಮಾಡಿ ಎಂದಿದ್ದರು. ಈಗ ಪಂಚಮಸಾಲಿ ಎನ್ನುತ್ತಿದ್ದಾರೆ, ಸ್ವಾಮೀಜಿಗಳು ಮಠದಲ್ಲಿ ಕುಳಿತು ಜನರಿಗೆ ಮಾರ್ಗದರ್ಶನ ಮಾಡುವ ಕೆಲಸ ಮಾಡಲಿ. ಇನ್ನೂ ಕೆಲವು ದಿನ ಯಡಿಯೂರಪ್ಪ ಬದಲಾವಣೆ ಸಾಧ್ಯವಿಲ್ಲ. ಯಡಿಯೂರಪ್ಪನವರನ್ನ ತೆಗೆದರೆ ಸರ್ಕಾರವೇ ಇರುವುದಿಲ್ಲ.
ಅವರನ್ನು ಬದಲಾಯಿಸುವುದು ಜೇನುಗೂಡಿಗೆ ಕೈಇಟ್ಟಂತೆ ಎಂದು ಹೇಳುವ ಮೂಲಕ ಹೊರಟ್ಟಿ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ, ಸಿಎಂ ಬದಲಿಸಬೇಕೆಂದು ವದಂತಿ ಹಬ್ಬಿಸುತ್ತಿರುವ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ನೀಡಿದ್ರು.
If we eliminate B.S Yediyurappa from the seat there won't be BJP government in Karnataka slammed MLC Basavaraj Horatti in Karwar
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm