ಬ್ರೇಕಿಂಗ್ ನ್ಯೂಸ್
10-04-24 07:59 pm Bangalore Correspondent ಕರ್ನಾಟಕ
ಬೆಂಗಳೂರು, ಎ.10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದ ಪತ್ರಿಕಾ ತುಣುಕು ಮಾದರಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಗ್ಗೆ ಬೆಂಗಳೂರು ಪಶ್ಚಿಮ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಂದುಗಳ ಮತ ನಮಗೆ ಬೇಡ, ಮುಸ್ಲಿಮರ ಮತ ಸಾಕು ; ಸಿದ್ದರಾಮಯ್ಯ ಎಂಬ ಹೆಸರಲ್ಲಿ ಬರೆದ ಪತ್ರಿಕಾ ವರದಿ ಮಾದರಿಯ ಫೇಕ್ ತುಣುಕನ್ನು ವಾಟ್ಸಪ್, ಫೇಸ್ಬುಕ್, ಟ್ವಿಟರ್ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಬಗ್ಗೆ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟರ್ ನಲ್ಲಿ ಎಫ್ಐಆರ್ ಪ್ರತಿ ಹಾಕ್ಕೊಂಡು ಹೀಗೆ ಬರೆದಿದ್ದಾರೆ.

'ವಾರ್ತಾ ಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ಫೇಕ್ ನ್ಯೂಸ್ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ' ಎಂದು ಮುಖ್ಯಮಂತ್ರಿ ಟ್ವಿಟರ್ ನಲ್ಲಿ ಪೋಸ್ಟ್ ಬರೆದಿದ್ದಾರೆ.
ಎಫ್ಐಆರ್ ನಲ್ಲಿ ಪ್ರಭಾಕರ ರೆಡ್ಡಿ, ವಸಂತ ಗಿಲಿಯಾರ್, ವಿಜಯ್ ಹೆರಗು, ಪಾಂಡು ಮೋದಿ ಪರಿವಾರ ಹಾಗೂ ಫೇಸ್ಬುಕ್ ಪೇಜ್ ಗಳಾದ ಬಿಎಸ್ವೈ ಸಪೋರ್ಟರ್ಸ್, ದಾವಣಗೆರೆ ಬಿಜೆಪಿ, ದಾತ್ರಿ ಗೋಶಾಲೆ ಗೋಳೂರು ವಿರುದ್ಧ ಪ್ರಕರಣ ದಾಖಲಾಗಿದೆ.
Fake video circulation of CM Siddaramaiah viral, Journalist Vasanth Giliyar and many others booked. Case filed at Bangalore Cyber crime police station.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm