ಬ್ರೇಕಿಂಗ್ ನ್ಯೂಸ್
10-04-24 07:59 pm Bangalore Correspondent ಕರ್ನಾಟಕ
ಬೆಂಗಳೂರು, ಎ.10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದ ಪತ್ರಿಕಾ ತುಣುಕು ಮಾದರಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಗ್ಗೆ ಬೆಂಗಳೂರು ಪಶ್ಚಿಮ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಂದುಗಳ ಮತ ನಮಗೆ ಬೇಡ, ಮುಸ್ಲಿಮರ ಮತ ಸಾಕು ; ಸಿದ್ದರಾಮಯ್ಯ ಎಂಬ ಹೆಸರಲ್ಲಿ ಬರೆದ ಪತ್ರಿಕಾ ವರದಿ ಮಾದರಿಯ ಫೇಕ್ ತುಣುಕನ್ನು ವಾಟ್ಸಪ್, ಫೇಸ್ಬುಕ್, ಟ್ವಿಟರ್ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಬಗ್ಗೆ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟರ್ ನಲ್ಲಿ ಎಫ್ಐಆರ್ ಪ್ರತಿ ಹಾಕ್ಕೊಂಡು ಹೀಗೆ ಬರೆದಿದ್ದಾರೆ.

'ವಾರ್ತಾ ಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ಫೇಕ್ ನ್ಯೂಸ್ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ' ಎಂದು ಮುಖ್ಯಮಂತ್ರಿ ಟ್ವಿಟರ್ ನಲ್ಲಿ ಪೋಸ್ಟ್ ಬರೆದಿದ್ದಾರೆ.
ಎಫ್ಐಆರ್ ನಲ್ಲಿ ಪ್ರಭಾಕರ ರೆಡ್ಡಿ, ವಸಂತ ಗಿಲಿಯಾರ್, ವಿಜಯ್ ಹೆರಗು, ಪಾಂಡು ಮೋದಿ ಪರಿವಾರ ಹಾಗೂ ಫೇಸ್ಬುಕ್ ಪೇಜ್ ಗಳಾದ ಬಿಎಸ್ವೈ ಸಪೋರ್ಟರ್ಸ್, ದಾವಣಗೆರೆ ಬಿಜೆಪಿ, ದಾತ್ರಿ ಗೋಶಾಲೆ ಗೋಳೂರು ವಿರುದ್ಧ ಪ್ರಕರಣ ದಾಖಲಾಗಿದೆ.
Fake video circulation of CM Siddaramaiah viral, Journalist Vasanth Giliyar and many others booked. Case filed at Bangalore Cyber crime police station.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm