ಬ್ರೇಕಿಂಗ್ ನ್ಯೂಸ್
10-04-24 07:59 pm Bangalore Correspondent ಕರ್ನಾಟಕ
ಬೆಂಗಳೂರು, ಎ.10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದ ಪತ್ರಿಕಾ ತುಣುಕು ಮಾದರಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಗ್ಗೆ ಬೆಂಗಳೂರು ಪಶ್ಚಿಮ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಂದುಗಳ ಮತ ನಮಗೆ ಬೇಡ, ಮುಸ್ಲಿಮರ ಮತ ಸಾಕು ; ಸಿದ್ದರಾಮಯ್ಯ ಎಂಬ ಹೆಸರಲ್ಲಿ ಬರೆದ ಪತ್ರಿಕಾ ವರದಿ ಮಾದರಿಯ ಫೇಕ್ ತುಣುಕನ್ನು ವಾಟ್ಸಪ್, ಫೇಸ್ಬುಕ್, ಟ್ವಿಟರ್ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಬಗ್ಗೆ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟರ್ ನಲ್ಲಿ ಎಫ್ಐಆರ್ ಪ್ರತಿ ಹಾಕ್ಕೊಂಡು ಹೀಗೆ ಬರೆದಿದ್ದಾರೆ.

'ವಾರ್ತಾ ಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ಫೇಕ್ ನ್ಯೂಸ್ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ' ಎಂದು ಮುಖ್ಯಮಂತ್ರಿ ಟ್ವಿಟರ್ ನಲ್ಲಿ ಪೋಸ್ಟ್ ಬರೆದಿದ್ದಾರೆ.
ಎಫ್ಐಆರ್ ನಲ್ಲಿ ಪ್ರಭಾಕರ ರೆಡ್ಡಿ, ವಸಂತ ಗಿಲಿಯಾರ್, ವಿಜಯ್ ಹೆರಗು, ಪಾಂಡು ಮೋದಿ ಪರಿವಾರ ಹಾಗೂ ಫೇಸ್ಬುಕ್ ಪೇಜ್ ಗಳಾದ ಬಿಎಸ್ವೈ ಸಪೋರ್ಟರ್ಸ್, ದಾವಣಗೆರೆ ಬಿಜೆಪಿ, ದಾತ್ರಿ ಗೋಶಾಲೆ ಗೋಳೂರು ವಿರುದ್ಧ ಪ್ರಕರಣ ದಾಖಲಾಗಿದೆ.
Fake video circulation of CM Siddaramaiah viral, Journalist Vasanth Giliyar and many others booked. Case filed at Bangalore Cyber crime police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm