Shivamogga Accident, Bus car: ಶಿವಮೊಗ್ಗ ; ಸಾರಿಗೆ ಬಸ್ - ಒಮ್ನಿ ನಡುವೆ ಡಿಕ್ಕಿ , ಸ್ಥಳದಲ್ಲೇ ಮೂವರ ಬಲಿ, ನುಜ್ಜುಗುಜ್ಜಾದ ಗಾಡಿ 

11-04-24 04:20 pm       HK NEWS   ಕರ್ನಾಟಕ

ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಬಿದರಹಳ್ಳಿ ಬಳಿ ವಾಯವ್ಯ ಕರ್ನಾಟಕ ಸಾರಿಗೆ ಬಸ್‌ ಹಾಗೂ ಓಮಿನಿ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂರು ಮಂದಿ ಮೃತಪಟ್ಟಿದ್ದಾರೆ.

ಶಿವಮೊಗ್ಗ, ಏ 11: ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಬಿದರಹಳ್ಳಿ ಬಳಿ ವಾಯವ್ಯ ಕರ್ನಾಟಕ ಸಾರಿಗೆ ಬಸ್‌ ಹಾಗೂ ಓಮಿನಿ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂರು ಮಂದಿ ಮೃತಪಟ್ಟಿದ್ದಾರೆ.

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುವ ದಾರಿಯಲ್ಲಿ ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಬಸ್‌ ಶಿಕಾರಿಪುರದತ್ತ ಹೊರಟಿದ್ದು, ಕಾರು ಸೂರಗೊಂಡನಕೊಪ್ಪದಿಂದ ಶಿಕಾರಿಪುರದ ಕಡೆಗೆ ತೆರಳುತ್ತಿತ್ತು. ಒಮಿನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಮೃತರು ಹರಮಘಟ್ಟದ ನಜುಂಡಪ್ಪ, ರಾಕೇಶ್, ದೇವರಾಜ್ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿದ್ದ ಕೆಲವರಿಗೆ ಗಾಯವಾಗಿದ್ದು ಚಿಕಿತ್ಸೆಗೆಂದು ಅವರನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್‌ ಅತಿ ವೇಗದ ಚಾಲನೆಯಿಂದ ಅಪಘಾತವಾಗಿದ್ದು, ಡಿಕ್ಕಿಯ ರಭಸಕ್ಕೆ ಒಮಿನಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಬಸ್‌ ರಸ್ತೆ ಪಕ್ಕದ ತಡೆಗೋಡೆಗೆ ಗುದ್ದಿರುವ ಪರಿಣಾಮ ಬಸ್‌ನ ಮುಂದಿನ ಚಕ್ರ ಕಳಚಿ, ಚಾಲಕನ ನಿಯಂತ್ರಣನಕ್ಕೆ ಸಿಗದೆ ಒಮಿನಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮೃತದೇಹಗಳು ಛಿದ್ರಗೊಂಡಿವೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga Accident, three killed on spot after ksrtc bus rammed a omni van in Shivamogga Shikaripur Highway