ಬ್ರೇಕಿಂಗ್ ನ್ಯೂಸ್
11-04-24 09:55 pm HK NEWS ಕರ್ನಾಟಕ
ಬೆಂಗಳೂರು, ಎ.11: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆಯೆಂಬ ಟೀಕೆ, ಆ ಬಗ್ಗೆ ಎಫ್ಐಆರ್ ದಾಖಲಾದ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್, ಹೇಳಿಕೆ ನೀಡುವಾಗ ನಾನು ಯಾವುದೇ ಸ್ತ್ರೀಲಿಂಗ, ಪುಲ್ಲಿಂಗ ಬಳಸಿಲ್ಲ. ಅದನ್ನ ಅವರಿಗೆ (ತಬು ರಾವ್) ಅಂದಿರುವುದಾಗಿ ತಿಳಿದುಕೊಂಡ್ರೆ ಯತ್ನಾಳ್ ಏನೂ ಮಾಡಕಾಗಲ್ಲ. ಕುಂಬಳಕಾಯಿ ಕಳ್ಳ ಅಂದ್ರೆ ಅವರು ಹೆಗಲು ಮುಟ್ಟಿಕೊಂಡು ನೋಡಿದರೆ ಏನು ಮಾಡೋದು ಎಂದು ವ್ಯಂಗ್ಯವಾಡಿದ್ದಾರೆ.
ನಿಮ್ಮ ಮನೆ ಅಂದ್ರೆ ಯಾವುದು? ಅವರ ಮನೆ ಹೇಗಿದೆ ಅಂತಾ ಯಾರಿಗೆ ಗೊತ್ತು. ಕಾಂಗ್ರೆಸ್ ಮನೆಯಲ್ಲಿ ಇರುವವರು ಅರ್ಧ ಪಾಕಿಸ್ತಾನ ಏಜೆಂಟ್ರಿದ್ದಾರೆ. ಕಾಂಗ್ರೆಸ್ಸಿಗರು ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನ್ನು ಸಮರ್ಥಿಸಿಕೊಂಡಿದ್ದರು. ಅದಕ್ಕೆ ಕಾಂಗ್ರೆಸ್ ಅರ್ಧ ಪಾಕಿಸ್ತಾನ ಇದೆ ಅಂತ ಹೇಳಿದ್ದೆ. ದಿನೇಶ್ ಗುಂಡೂರಾವ್ ಮನೆಯಂದ್ರೆ, ಕಾಂಗ್ರೆಸ್ ಮನೆ ಎಂದರ್ಥ ಎಂಬುದಾಗಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್, ಅದು ಒಂದು ದುರಂತ. ಪ್ರಣಾಳಿಕೆಯಲ್ಲಿ 370 ಕಲಂ ಮತ್ತೆ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ಅಂದ್ರೆ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಅಂತ ಇವರು ಭಾವಿಸಿಲ್ಲ. ಅಲ್ಪಸಂಖ್ಯಾತರಿಗಾಗಿ ವಿಶೇಷ ಕಾನೂನು ಮಾಡುತ್ತೇವೆ ಅನ್ನುತ್ತಾರೆ. ಮುಸ್ಲಿಂ ಪರವಾಗಿ ವಿಶೇಷ ಕಾನೂನು ಮಾಡ್ತಾರೆ ಅಂದ್ರೆ 5 ವರ್ಷದಲ್ಲಿ ಪಾಕಿಸ್ತಾನ ಮಾಡ್ತಾರಾ ಎಂದು ಪ್ರಶ್ನೆ ಮಾಡಿದರು.
ಇವರಿಗೆ ಮಾನ ಮರ್ಯಾದೆ ಇದೆಯಾ? ಒಂದಾದ್ರೂ ಹಿಂದುಗಳ ಪರವಾಗಿ ಏನಾದ್ರೂ ಮಾಡಿದ್ದೀರಾ? ಅಯೋಧ್ಯ ರಾಮನಿಗೆ ವಿರೋಧ ಮಾಡಿದ ನಾಲಾಯಕರು ಕಾಂಗ್ರೆಸ್ಸಿಗರು ಎಂದು ವಾಗ್ದಾಳಿ ನಡೆಸಿದರು.
ಈಶ್ವರಪ್ಪ ತಮ್ಮ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಫೋಟೋ ಹಾಕಿದ್ದಕ್ಕೆ ವಿರೋಧ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಧಾನಿ ಮೋದಿ ಫೋಟೋ ಹಾಕಲು ಯಾರದೂ ತಕರಾರು ಇಲ್ಲ. ಅವರು ಇಡೀ ಜಗತ್ತಿನ ನಾಯಕರಿದ್ದಾರೆ. ನಾನು ಮೋದಿ ಫ್ಯಾನ್ ಇದ್ದೇನೆ ಅಂದ್ರೆ ಏನು ಮಾಡಕಾಗಲ್ಲ. ಮೋದಿ ಪೋಟೋ ಹಾಕಲು ನಾನು ವಿರೋಧ ಮಾಡಲ್ಲ ಎಂದು ಈಶ್ವರಪ್ಪ ಪರ ಬ್ಯಾಟ್ ಬೀಸಿದರು.
BJP MLA Yatnal half Pakistan, says it was not for dinesh gundu rao wife. The Bengaluru police recently booked BJP Bijapur MLA Basanagouda Patil Yatnal for allegedly referring to Karnataka Health Minister Dinesh Gundu Rao’s house as ‘half Pakistan’.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm