ಬ್ರೇಕಿಂಗ್ ನ್ಯೂಸ್
12-04-24 03:29 pm HK NEWS ಕರ್ನಾಟಕ
ಬೆಂಗಳೂರು, ಏ 12: ತಮಿಳುನಾಡಿನ ಧರ್ಮಪುರಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್ಟೇಬಲ್ಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಹಾಗೂ ಮತ್ತೊಬ್ಬ ಕಾನ್ಸ್ಟೇಬಲ್ ಗಾಯಗೊಂಡಿದ್ದಾರೆ.
ಕರ್ನಾಟಕ ಮೀಸಲು ಪಡೆಯ ಕೋರಮಂಗಲದಲ್ಲಿರುವ 3ನೇ ಬೆಟಾಲಿಯನ್ನ 3ನೇ ಸಹಾಯಕ ಕಮಾಂಡೆಂಟ್ ಟಿ.ಪ್ರಭಾಕರ್ ಮತ್ತು ವಿಜಯಪುರದ ಐಆರ್ಬಿ (ಇಂಡಿಯನ್ ರಿಸರ್ವ್ ಬೆಟಾಲಿಯನ್)ನ ಕಾನ್ಸ್ಟೇಬಲ್ ವಿಠಲ್ ಗಡಾಧರ್, ತಮಿಳುನಾಡಿನ ಮೀಸಲು ಪಡೆಯ ಕಾನ್ಸ್ಟೇಬಲ್ ದಿನೇಶ್ ಎಂಬವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಜಯಪುರದ ಐಆರ್ಬಿ ಡೆಪ್ಯೂಟಿ ಕಮಾಂಡೆಂಟ್ ಯು.ಎನ್.ಹೇಮಂತ್ ಕುಮಾರ್ ಮತ್ತು ಕಾನ್ಸ್ಟೇಬಲ್ ಜಯಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕೆಎಸ್ಆರ್ಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10 ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್ಆರ್ಪಿಯ ತುಕಡಿಯನ್ನು ತಮಿಳುನಾಡಿನ ಧರ್ಮಪುರಿಗೆ ನಿಯೋಜಿಸಲಾಗಿತ್ತು. ಅದಕ್ಕೆ ಹೇಮಂತ್ ಕುಮಾರ್ ಮುಂದಾಳತ್ವ ವಹಿಸಿದ್ದರು. ಗುರುವಾರ ಸಂಜೆ 5.30ರ ಸುಮಾರಿಗೆ ತಿರುವಣ್ಣಾಮಲೈನಿಂದ ದಿಂಡಿವಣ್ಣಂ ಕಡೆಗೆ ಜೀಪ್ನಲ್ಲಿ ಐವರು ಅಧಿಕಾರಿ ಮತ್ತು ಸಿಬ್ಬಂದಿ ತೆರಳುತ್ತಿದ್ದರು. ಕಮಾಂಡೆಂಟ್ ಪ್ರಭಾಕರ್ ಜೀಪ್ನ ಮುಂಭಾಗ ಕುಳಿತಿದ್ದರು. ಹಿಂಭಾಗದಲ್ಲಿ ಕಾನ್ಸ್ಟೇಬಲ್ ವಿಠಲ್, ಡೆಪ್ಯೂಟಿ ಕಮಾಂಡೆಂಟ್ ಹೇಮಂತ್ ಹಾಗೂ ತಮಿಳುನಾಡಿನ ಸಿಬ್ಬಂದಿ, ಕಾನ್ಸ್ಟೇಬಲ್ ಇದ್ದರು.
ಮಾರ್ಗ ಮಧ್ಯೆ ಅತಿ ವೇಗವಾಗಿ ಬಂದ ತಮಿಳುನಾಡಿನ ಬಸ್ ಇವರ ಜೀಪಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಭಾಕರ್, ವಿಠಲ್, ತಮಿಳುನಾಡಿನ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಕೆಎಸ್ಆರ್ಪಿಯ ಹಿರಿಯ ಅಧಿಕಾರಿ ಭೀಮಪ್ಪ ಎಂಬವರನ್ನು ನಿಯೋಜಿಸಲಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಬಳಿಕ ಅಧಿಕಾರಿ-ಸಿಬ್ಬಂದಿಯ ಮರಣೋತ್ತರ ಪರೀಕ್ಷೆ ಹಾಗೂ ಮೃತದೇಹಗಳನ್ನು ರಾಜ್ಯಕ್ಕೆ ತರುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಕೆಎಸ್ಆರ್ಪಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
A KSRP police officer on duty from Karnataka is killed in a road accident in Tamil Nadu. The deceased has been identified as Hemanth Kumar from Vijayapura. He was on his way to the election duty in Tamil Nadu
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am