ಬ್ರೇಕಿಂಗ್ ನ್ಯೂಸ್
12-04-24 03:29 pm HK NEWS ಕರ್ನಾಟಕ
ಬೆಂಗಳೂರು, ಏ 12: ತಮಿಳುನಾಡಿನ ಧರ್ಮಪುರಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್ಟೇಬಲ್ಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಹಾಗೂ ಮತ್ತೊಬ್ಬ ಕಾನ್ಸ್ಟೇಬಲ್ ಗಾಯಗೊಂಡಿದ್ದಾರೆ.
ಕರ್ನಾಟಕ ಮೀಸಲು ಪಡೆಯ ಕೋರಮಂಗಲದಲ್ಲಿರುವ 3ನೇ ಬೆಟಾಲಿಯನ್ನ 3ನೇ ಸಹಾಯಕ ಕಮಾಂಡೆಂಟ್ ಟಿ.ಪ್ರಭಾಕರ್ ಮತ್ತು ವಿಜಯಪುರದ ಐಆರ್ಬಿ (ಇಂಡಿಯನ್ ರಿಸರ್ವ್ ಬೆಟಾಲಿಯನ್)ನ ಕಾನ್ಸ್ಟೇಬಲ್ ವಿಠಲ್ ಗಡಾಧರ್, ತಮಿಳುನಾಡಿನ ಮೀಸಲು ಪಡೆಯ ಕಾನ್ಸ್ಟೇಬಲ್ ದಿನೇಶ್ ಎಂಬವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಜಯಪುರದ ಐಆರ್ಬಿ ಡೆಪ್ಯೂಟಿ ಕಮಾಂಡೆಂಟ್ ಯು.ಎನ್.ಹೇಮಂತ್ ಕುಮಾರ್ ಮತ್ತು ಕಾನ್ಸ್ಟೇಬಲ್ ಜಯಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕೆಎಸ್ಆರ್ಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10 ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್ಆರ್ಪಿಯ ತುಕಡಿಯನ್ನು ತಮಿಳುನಾಡಿನ ಧರ್ಮಪುರಿಗೆ ನಿಯೋಜಿಸಲಾಗಿತ್ತು. ಅದಕ್ಕೆ ಹೇಮಂತ್ ಕುಮಾರ್ ಮುಂದಾಳತ್ವ ವಹಿಸಿದ್ದರು. ಗುರುವಾರ ಸಂಜೆ 5.30ರ ಸುಮಾರಿಗೆ ತಿರುವಣ್ಣಾಮಲೈನಿಂದ ದಿಂಡಿವಣ್ಣಂ ಕಡೆಗೆ ಜೀಪ್ನಲ್ಲಿ ಐವರು ಅಧಿಕಾರಿ ಮತ್ತು ಸಿಬ್ಬಂದಿ ತೆರಳುತ್ತಿದ್ದರು. ಕಮಾಂಡೆಂಟ್ ಪ್ರಭಾಕರ್ ಜೀಪ್ನ ಮುಂಭಾಗ ಕುಳಿತಿದ್ದರು. ಹಿಂಭಾಗದಲ್ಲಿ ಕಾನ್ಸ್ಟೇಬಲ್ ವಿಠಲ್, ಡೆಪ್ಯೂಟಿ ಕಮಾಂಡೆಂಟ್ ಹೇಮಂತ್ ಹಾಗೂ ತಮಿಳುನಾಡಿನ ಸಿಬ್ಬಂದಿ, ಕಾನ್ಸ್ಟೇಬಲ್ ಇದ್ದರು.
ಮಾರ್ಗ ಮಧ್ಯೆ ಅತಿ ವೇಗವಾಗಿ ಬಂದ ತಮಿಳುನಾಡಿನ ಬಸ್ ಇವರ ಜೀಪಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಭಾಕರ್, ವಿಠಲ್, ತಮಿಳುನಾಡಿನ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಕೆಎಸ್ಆರ್ಪಿಯ ಹಿರಿಯ ಅಧಿಕಾರಿ ಭೀಮಪ್ಪ ಎಂಬವರನ್ನು ನಿಯೋಜಿಸಲಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಬಳಿಕ ಅಧಿಕಾರಿ-ಸಿಬ್ಬಂದಿಯ ಮರಣೋತ್ತರ ಪರೀಕ್ಷೆ ಹಾಗೂ ಮೃತದೇಹಗಳನ್ನು ರಾಜ್ಯಕ್ಕೆ ತರುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಕೆಎಸ್ಆರ್ಪಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
A KSRP police officer on duty from Karnataka is killed in a road accident in Tamil Nadu. The deceased has been identified as Hemanth Kumar from Vijayapura. He was on his way to the election duty in Tamil Nadu
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm