ಬ್ರೇಕಿಂಗ್ ನ್ಯೂಸ್
12-04-24 03:29 pm HK NEWS ಕರ್ನಾಟಕ
ಬೆಂಗಳೂರು, ಏ 12: ತಮಿಳುನಾಡಿನ ಧರ್ಮಪುರಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್ಟೇಬಲ್ಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಹಾಗೂ ಮತ್ತೊಬ್ಬ ಕಾನ್ಸ್ಟೇಬಲ್ ಗಾಯಗೊಂಡಿದ್ದಾರೆ.
ಕರ್ನಾಟಕ ಮೀಸಲು ಪಡೆಯ ಕೋರಮಂಗಲದಲ್ಲಿರುವ 3ನೇ ಬೆಟಾಲಿಯನ್ನ 3ನೇ ಸಹಾಯಕ ಕಮಾಂಡೆಂಟ್ ಟಿ.ಪ್ರಭಾಕರ್ ಮತ್ತು ವಿಜಯಪುರದ ಐಆರ್ಬಿ (ಇಂಡಿಯನ್ ರಿಸರ್ವ್ ಬೆಟಾಲಿಯನ್)ನ ಕಾನ್ಸ್ಟೇಬಲ್ ವಿಠಲ್ ಗಡಾಧರ್, ತಮಿಳುನಾಡಿನ ಮೀಸಲು ಪಡೆಯ ಕಾನ್ಸ್ಟೇಬಲ್ ದಿನೇಶ್ ಎಂಬವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಜಯಪುರದ ಐಆರ್ಬಿ ಡೆಪ್ಯೂಟಿ ಕಮಾಂಡೆಂಟ್ ಯು.ಎನ್.ಹೇಮಂತ್ ಕುಮಾರ್ ಮತ್ತು ಕಾನ್ಸ್ಟೇಬಲ್ ಜಯಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕೆಎಸ್ಆರ್ಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10 ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್ಆರ್ಪಿಯ ತುಕಡಿಯನ್ನು ತಮಿಳುನಾಡಿನ ಧರ್ಮಪುರಿಗೆ ನಿಯೋಜಿಸಲಾಗಿತ್ತು. ಅದಕ್ಕೆ ಹೇಮಂತ್ ಕುಮಾರ್ ಮುಂದಾಳತ್ವ ವಹಿಸಿದ್ದರು. ಗುರುವಾರ ಸಂಜೆ 5.30ರ ಸುಮಾರಿಗೆ ತಿರುವಣ್ಣಾಮಲೈನಿಂದ ದಿಂಡಿವಣ್ಣಂ ಕಡೆಗೆ ಜೀಪ್ನಲ್ಲಿ ಐವರು ಅಧಿಕಾರಿ ಮತ್ತು ಸಿಬ್ಬಂದಿ ತೆರಳುತ್ತಿದ್ದರು. ಕಮಾಂಡೆಂಟ್ ಪ್ರಭಾಕರ್ ಜೀಪ್ನ ಮುಂಭಾಗ ಕುಳಿತಿದ್ದರು. ಹಿಂಭಾಗದಲ್ಲಿ ಕಾನ್ಸ್ಟೇಬಲ್ ವಿಠಲ್, ಡೆಪ್ಯೂಟಿ ಕಮಾಂಡೆಂಟ್ ಹೇಮಂತ್ ಹಾಗೂ ತಮಿಳುನಾಡಿನ ಸಿಬ್ಬಂದಿ, ಕಾನ್ಸ್ಟೇಬಲ್ ಇದ್ದರು.
ಮಾರ್ಗ ಮಧ್ಯೆ ಅತಿ ವೇಗವಾಗಿ ಬಂದ ತಮಿಳುನಾಡಿನ ಬಸ್ ಇವರ ಜೀಪಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಭಾಕರ್, ವಿಠಲ್, ತಮಿಳುನಾಡಿನ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಕೆಎಸ್ಆರ್ಪಿಯ ಹಿರಿಯ ಅಧಿಕಾರಿ ಭೀಮಪ್ಪ ಎಂಬವರನ್ನು ನಿಯೋಜಿಸಲಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಬಳಿಕ ಅಧಿಕಾರಿ-ಸಿಬ್ಬಂದಿಯ ಮರಣೋತ್ತರ ಪರೀಕ್ಷೆ ಹಾಗೂ ಮೃತದೇಹಗಳನ್ನು ರಾಜ್ಯಕ್ಕೆ ತರುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಕೆಎಸ್ಆರ್ಪಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
A KSRP police officer on duty from Karnataka is killed in a road accident in Tamil Nadu. The deceased has been identified as Hemanth Kumar from Vijayapura. He was on his way to the election duty in Tamil Nadu
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm