ಬ್ರೇಕಿಂಗ್ ನ್ಯೂಸ್
12-04-24 03:29 pm HK NEWS ಕರ್ನಾಟಕ
ಬೆಂಗಳೂರು, ಏ 12: ತಮಿಳುನಾಡಿನ ಧರ್ಮಪುರಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್ಟೇಬಲ್ಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಹಾಗೂ ಮತ್ತೊಬ್ಬ ಕಾನ್ಸ್ಟೇಬಲ್ ಗಾಯಗೊಂಡಿದ್ದಾರೆ.
ಕರ್ನಾಟಕ ಮೀಸಲು ಪಡೆಯ ಕೋರಮಂಗಲದಲ್ಲಿರುವ 3ನೇ ಬೆಟಾಲಿಯನ್ನ 3ನೇ ಸಹಾಯಕ ಕಮಾಂಡೆಂಟ್ ಟಿ.ಪ್ರಭಾಕರ್ ಮತ್ತು ವಿಜಯಪುರದ ಐಆರ್ಬಿ (ಇಂಡಿಯನ್ ರಿಸರ್ವ್ ಬೆಟಾಲಿಯನ್)ನ ಕಾನ್ಸ್ಟೇಬಲ್ ವಿಠಲ್ ಗಡಾಧರ್, ತಮಿಳುನಾಡಿನ ಮೀಸಲು ಪಡೆಯ ಕಾನ್ಸ್ಟೇಬಲ್ ದಿನೇಶ್ ಎಂಬವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಜಯಪುರದ ಐಆರ್ಬಿ ಡೆಪ್ಯೂಟಿ ಕಮಾಂಡೆಂಟ್ ಯು.ಎನ್.ಹೇಮಂತ್ ಕುಮಾರ್ ಮತ್ತು ಕಾನ್ಸ್ಟೇಬಲ್ ಜಯಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕೆಎಸ್ಆರ್ಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10 ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್ಆರ್ಪಿಯ ತುಕಡಿಯನ್ನು ತಮಿಳುನಾಡಿನ ಧರ್ಮಪುರಿಗೆ ನಿಯೋಜಿಸಲಾಗಿತ್ತು. ಅದಕ್ಕೆ ಹೇಮಂತ್ ಕುಮಾರ್ ಮುಂದಾಳತ್ವ ವಹಿಸಿದ್ದರು. ಗುರುವಾರ ಸಂಜೆ 5.30ರ ಸುಮಾರಿಗೆ ತಿರುವಣ್ಣಾಮಲೈನಿಂದ ದಿಂಡಿವಣ್ಣಂ ಕಡೆಗೆ ಜೀಪ್ನಲ್ಲಿ ಐವರು ಅಧಿಕಾರಿ ಮತ್ತು ಸಿಬ್ಬಂದಿ ತೆರಳುತ್ತಿದ್ದರು. ಕಮಾಂಡೆಂಟ್ ಪ್ರಭಾಕರ್ ಜೀಪ್ನ ಮುಂಭಾಗ ಕುಳಿತಿದ್ದರು. ಹಿಂಭಾಗದಲ್ಲಿ ಕಾನ್ಸ್ಟೇಬಲ್ ವಿಠಲ್, ಡೆಪ್ಯೂಟಿ ಕಮಾಂಡೆಂಟ್ ಹೇಮಂತ್ ಹಾಗೂ ತಮಿಳುನಾಡಿನ ಸಿಬ್ಬಂದಿ, ಕಾನ್ಸ್ಟೇಬಲ್ ಇದ್ದರು.
ಮಾರ್ಗ ಮಧ್ಯೆ ಅತಿ ವೇಗವಾಗಿ ಬಂದ ತಮಿಳುನಾಡಿನ ಬಸ್ ಇವರ ಜೀಪಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಭಾಕರ್, ವಿಠಲ್, ತಮಿಳುನಾಡಿನ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಕೆಎಸ್ಆರ್ಪಿಯ ಹಿರಿಯ ಅಧಿಕಾರಿ ಭೀಮಪ್ಪ ಎಂಬವರನ್ನು ನಿಯೋಜಿಸಲಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಬಳಿಕ ಅಧಿಕಾರಿ-ಸಿಬ್ಬಂದಿಯ ಮರಣೋತ್ತರ ಪರೀಕ್ಷೆ ಹಾಗೂ ಮೃತದೇಹಗಳನ್ನು ರಾಜ್ಯಕ್ಕೆ ತರುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಕೆಎಸ್ಆರ್ಪಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
A KSRP police officer on duty from Karnataka is killed in a road accident in Tamil Nadu. The deceased has been identified as Hemanth Kumar from Vijayapura. He was on his way to the election duty in Tamil Nadu
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm