ಬ್ರೇಕಿಂಗ್ ನ್ಯೂಸ್
13-04-24 02:53 pm HK NEWS ಕರ್ನಾಟಕ
ವಿಜಯಪುರ, ಏ 13: ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಘಟನೆ ನಡೆದಿದೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಸಂಬಂಧಿಗಳಾಗಿದ್ದರು ಎಂದು ತಿಳಿದು ಬಂದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬರಟಗಿ ತಾಂಡಾದ ಅರ್ಜುನ ರಜಪೂತ (32), ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ರವಿನಾಥ ಸುನಿಲಾಲ್ ಪತ್ತಾರ (52), ಪುಷ್ಟಾ ರವಿನಾಥ ಪತ್ತಾರ (40) ಹಾಗೂ ಮುಧೋಳ ಪಟ್ಟಣದ ಮೇಘರಾಜ ರಜಪೂತ (12) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನು ಜಯಶ್ರೀ ರಜಪೂತ, ನಯಾರಾ ರಜಪೂತ ಹಾಗೂ ಪ್ರೇಮಸಿಂಗ್ ರಜಪೂತ ಎಂದು ಗುರುತಿಸಲಾಗಿದೆ. ಇವರಲ್ಲಿ ಬಾಲಕಿ ನಯಾರಾ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ ಕಾರಿನಲ್ಲಿ ಈ 7 ಜನರು ತೆರಳುತ್ತಿದ್ದರು. ಜಮಖಂಡಿಯಿಂದ ಸಿಮೆಂಟ್ ಲೋಡ್ ತುಂಬಿದ್ದ ಲಾರಿಯು ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬಬಲೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅಪಘಾತದ ರಭಸಕ್ಕೆ ಕಾರಿನಲ್ಲೇ ಸಿಲುಕಿಕೊಂಡಿದ್ದ ಶವಗಳನ್ನು ಸ್ಥಳೀಯರ ನೆರವಿನೊಂದಿಗೆ ಹೊರಗೆ ತೆಗೆದಿದ್ದಾರೆ.
ಈ ಬಗ್ಗೆ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ಶಂಕರ ಮಾರಿಹಾಳ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆಂದು ವಿಜಯಪುರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಮೃತಪಟ್ಟ ಅರ್ಜುನ ಮತ್ತು ರವಿನಾಥ ಇಬ್ಬರೂ ಬ್ಯಾಂಕ್ ಸಿಬ್ಬಂದಿಯಾಗಿದ್ದು, ವರಸೆಯಲ್ಲಿ ಅಳಿಯ ಮಾವ ಆಗಿದ್ದರು. ಮಾವ ರವಿನಾಥನಿಗೆ ವಿಜಯಪುರಕ್ಕೆ ವರ್ಗವಾಗಿದ್ದು, ಅವರ ಮನೆಯ ವಸ್ತುಗಳನ್ನ ಮುಧೋಳದಿಂದ ವಿಜಯಪುರಕ್ಕೆ ಶಿಫ್ಟ್ ಮಾಡಲೆಂದು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.
Four persons were killed on the spot in a road accident at Arjunagi village in Vijayapura district in Karnataka, on Saturday morning. According to police, the accident took place following a head-on collision between their car and a truck. All the deceased were travelling to a temple in Jamkhandi town from Vijayapura city.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm