ಬ್ರೇಕಿಂಗ್ ನ್ಯೂಸ್
15-04-24 12:11 pm HK News Desk ಕರ್ನಾಟಕ
ಬಾಗಲಕೋಟೆ, ಏ.15: ರಸ್ತೆ ಬದಿ ನಿಂತಿದ್ದವರ ಮೇಲೆ ಮಣ್ಣು ತುಂಬಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಬೀಳಗಿ ತಾಲೂಕಿನ ಯತ್ನಟ್ಟಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟವರನ್ನು ಬೀಳಗಿ ತಾಲೂಕು ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (72), ಅವರ ಪತ್ನಿ ಯಲ್ಲವ್ವ ಯಂಕಪ್ಪ ತೋಳಮಟ್ಟಿ (66), ಪುತ್ರ ಪುಂಡಲೀಕ ಯಂಕಪ್ಪ ತೋಳಮಟ್ಟಿ (40), ಪುತ್ರಿ ನಾಗವ್ವ ಅಶೋಕ ಬಮ್ಮನ್ನವರ, ನಾಗವ್ವಳ ಪತಿ ಮತ್ತು ಯಂಕಪ್ಪ ಅವರ ಅಳಿಯ ಅಶೋಕ ನಿಂಗಪ್ಪ ಬಮ್ಮನ್ನವರ (48) ಎಂದು ಗುರುತಿಸಲಾಗಿದೆ.
ಈ ಕುಟುಂಬ ಹೊಲದಲ್ಲಿ ಕೆಲಸ ಮುಗಿಸಿ ಮರಳಿ ತಮ್ಮೂರು ಬಾದರದಿನ್ನಿಗೆ ತೆರಳಲು ಯತ್ನಟ್ಟಿ ಕ್ರಾಸ್ ಬಳಿ ರಸ್ತೆಯ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ರಸ್ತೆಯಲ್ಲಿ ಮಣ್ಣು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಟಿಪ್ಪರ್ ವಾಹನದ ಟೈರ್ ಸ್ಪೋಟಗೊಂಡಿದೆ. ಪರಿಣಾಮ ಅಲ್ಲೇ ರಸ್ತೆ ಪಕ್ಕದಲ್ಲಿ ನಿಂತಿದ್ದ ಐವರ ಮೇಲೆ ಪಲ್ಟಿಯಾಗಿದೆ. ಐವರೂ ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ತಕ್ಷಣ ಟಿಪ್ಪರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಬೀಳಗಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಬಾದರದಿನ್ನಿ, ಯತ್ನಟ್ಟಿಯ ನೂರಾರು ಜನರು ಸ್ಥಳಕ್ಕೆ ಧಾವಿಸಿ ರೋಧಿಸಿದರು. ಇನ್ನೇನು 10 ನಿಮಿಷ ಕಳೆದಿದ್ದರೆ, ಅವರೆಲ್ಲ ಮನೆ ಸೇರುವವರಿದ್ದರು. ಆದರೆ, ಯಮನಂತೆ ಬಂದ ಟಿಪ್ಪರ್ ಐವರನ್ನು ಬಲಿ ಪಡೆದಿದೆ.
Bagalkote accident, five killed after truck topples on road after trye blast. Family members were about to reach home in just 10 minutes but suddenly mud truck toppled over them after trye blast.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm