ಬ್ರೇಕಿಂಗ್ ನ್ಯೂಸ್
15-04-24 05:51 pm Bangalore Correspondent ಕರ್ನಾಟಕ
ಬೆಂಗಳೂರು, ಏ 15: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಜನರನ್ನು ತಳ್ಳಿಕೊಂಡೇ ಹೊರ ನಡೆದಿದ್ದಾರೆ.
ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
ಕಾಂಗ್ರೆಸ್ ವ್ಯಂಗ್ಯ ;
ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ "ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.
ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ, ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದು ಹೇಳಿದೆ.
#BJP MP Tejaswi Surya had to run away from an election campaign event after investors who lost money in the multi-crore scam involving the Guru Raghavendra Sahakara Bank started asking questions.
— Mister J. - مسٹر جے (@Angryman_J) April 15, 2024
Depositors allege that they have not received compensation as promised. pic.twitter.com/GGZXX1GzHd
BJP MP Tejasvi Surya was forced to leave a public meeting in Bengaluru after being confronted by disgruntled depositors who had suffered losses in a multi-crore scam involving the Sri Guru Raghavendra Sahakara Bank Niyamitha (SGRSBN).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm