ಬ್ರೇಕಿಂಗ್ ನ್ಯೂಸ್
15-04-24 06:47 pm HK News Desk ಕರ್ನಾಟಕ
ಬೆಳಗಾವಿ, ಏ.15: ಮಿಸ್ಟರ್ ಕುಮಾರಸ್ವಾಮಿ, ಮಿಸ್ಟರ್ ಕುಮಾರಸ್ವಾಮಿ, ನೀನು ಲೋಕಸಭಾ ಚುನಾವಣೆ ಗೆಲ್ಲಲ್ಲ. ನನ್ನ ಆಸ್ತಿ ಬಗ್ಗೆ ಮಾತಾಡ್ತೀಯಾ? ನಿಂದು ಎಷ್ಟಿತ್ತು, ನಿಮ್ಮ ಅಣ್ಣಂದು ಎಷ್ಟಿತ್ತು, ನಿಮ್ಮ ಕುಟುಂಬದ ಆಸ್ತಿ ಎಷ್ಟಿದೆ. ಬಾ ಅಸೆಂಬ್ಲಿಯಲ್ಲಿ ಮಾತಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಎಚ್ಡಿ ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಮಕ್ಳೆಲ್ಲಾ ತಿರುಗಿ ಬಿದ್ದಮೇಲೆ ಎಚ್ಡಿ ಕುಮಾರಸ್ವಾಮಿ ಅವರಿಗೆ ಈಗ ಜ್ಞಾನೋದಯವಾಗಿದೆ. ನನ್ನ ಮೇಲೂ ಹರಿಹಾಯ್ದಿದ್ದಾರೆ, ಇರಲಿ ಅವರಿಗೂ ನನಗೂ ಇದ್ದಿದ್ದೆ. ನಾನು ಅವರಿಗೆ ಈ ಹಿಂದೆನೆ ಹೇಳಿದ್ದೇನೆ, ನೀನು ಹೇಗಿದ್ರು ಎಂಪಿಯಾಗಿ ಹೋಗೋದಿಲ್ಲ, ಅದು ಬೇರೆ ಮಾತು ಬಿಡಿ. ಈ ಹಿಂದೆಯೇ ನನ್ನ ಬಗ್ಗೆ ಚರ್ಚೆ ಮಾಡೋಕೆ ಟಿವಿಗೆ ಕರೀರಿ ಬರ್ತಿನಿ, ಇಲ್ಲ ವಿಧಾನಸಭೆಯಲ್ಲೇ ಮಾತಾಡೋಣ ಎಂದಿದ್ದೆ. ಯಾಕಂದ್ರೆ ಆಸ್ತಿ ಬಗ್ಗೆ ಮಾತನಾಡುವಾಗ ದಾಖಲೆ ಇರಬೇಕಲ್ಲ ಎಂದರು.

ನಾನ್ಯಾವುದೋ ಹೆಣ್ಮಗಳನ್ನು ಕರ್ಕೊಂಡು ಹೋಗಿ ಆಸ್ತಿ ಬರೆಸಿಕೊಂಡಿದ್ದೇನೆ ಅಂತೆ. ಮಿಸ್ಟರ್ ಕುಮಾರಸ್ವಾಮಿ, ಮಿಸ್ಟರ್ ಕುಮಾರಸ್ವಾಮಿ, ನೀನು ಲೋಕಸಭಾ ಚುನಾವಣೆ ಗೆಲ್ಲಲ್ಲ. ಹೆದರಿಕೊಂಡು ನಿನ್ನ ಕ್ಷೇತ್ರ ಬಿಟ್ಟು, ಪಕ್ಕದ ಕ್ಷೇತ್ರಕ್ಕೆ ಹೋಗಿದೀಯಾ ಹೋಗು. ನಿಂಗೆ ಹೋಗೋಕೆ ಹಕ್ಕಿದೆ, ಹೋಗಿದೀಯಾ. ಇದನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಬನ್ನಿ. ಯಾಕೆಂದ್ರೆ ನಮ್ಮ ಜನರೇಷನ್ ನೀನೆಂಥ ಸುಳ್ಳುಗಾರ, ನೀನೆಂಥ ಮೋಸಗಾರ ಎಂಬುದನ್ನು ನೋಡಬೇಕು. ನಿಂದು ಎಷ್ಟಿತ್ತು, ನಿಮ್ಮ ಅಣ್ಣಂದು ಎಷ್ಟಿತ್ತು, ನಿಮ್ಮ ಕುಟುಂಬದ ಆಸ್ತಿ ಎಷ್ಟಿದೆ. ಬಾ ಅಸೆಂಬ್ಲಿಯಲ್ಲಿ ಮಾತಾಡೋಣ ಎಂದು ಬಹಿರಂಗ ಸವಾಲು ಹಾಕಿದ ಅವರು, ನಾನು ಕಲ್ಲು ಮಾರಿದ್ನೋ, ಕಳ್ಳತನ ಮಾಡಿದ್ನೋ ಎಂಬುದು ಅಸೆಂಬ್ಲಿಯಲ್ಲೇ ತೀರ್ಮಾನ ಆಗಲಿ ಎಂದು ಹೇಳಿದರು.
ಮಹಿಳೆಯರಿಗೆ ಅನುಕೂಲ ಆಗಲಿ ಎಂದು ಉಚಿತ ಬಸ್ ಹಾಗೂ 2 ಸಾವಿರ ರೂ. ಕೊಡುತ್ತಿದ್ದೇವೆ. ಅದನ್ನು ನೀನು ಹೋಗಿ ಹೆಣ್ಮಕ್ಳು ದಾರಿ ತಪ್ತಿದ್ದಾರೆ ಅಂದ್ರೇ ಏನರ್ಥ. ನಮ್ಮ ಹೆಣ್ಮಕ್ಳೇನು ದಡ್ಡರು ಅನ್ಕೊಂಡಿದೀರಾ ಎಂದು ಪ್ರಶ್ನಿಸಿದರು.
DK Shivakumar slams Kumaraswamy says he wont win, we will discuss how much money you and your brother did, lets discuss that in the assembly he added.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm