ಬ್ರೇಕಿಂಗ್ ನ್ಯೂಸ್
15-04-24 06:47 pm HK News Desk ಕರ್ನಾಟಕ
ಬೆಳಗಾವಿ, ಏ.15: ಮಿಸ್ಟರ್ ಕುಮಾರಸ್ವಾಮಿ, ಮಿಸ್ಟರ್ ಕುಮಾರಸ್ವಾಮಿ, ನೀನು ಲೋಕಸಭಾ ಚುನಾವಣೆ ಗೆಲ್ಲಲ್ಲ. ನನ್ನ ಆಸ್ತಿ ಬಗ್ಗೆ ಮಾತಾಡ್ತೀಯಾ? ನಿಂದು ಎಷ್ಟಿತ್ತು, ನಿಮ್ಮ ಅಣ್ಣಂದು ಎಷ್ಟಿತ್ತು, ನಿಮ್ಮ ಕುಟುಂಬದ ಆಸ್ತಿ ಎಷ್ಟಿದೆ. ಬಾ ಅಸೆಂಬ್ಲಿಯಲ್ಲಿ ಮಾತಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಎಚ್ಡಿ ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಮಕ್ಳೆಲ್ಲಾ ತಿರುಗಿ ಬಿದ್ದಮೇಲೆ ಎಚ್ಡಿ ಕುಮಾರಸ್ವಾಮಿ ಅವರಿಗೆ ಈಗ ಜ್ಞಾನೋದಯವಾಗಿದೆ. ನನ್ನ ಮೇಲೂ ಹರಿಹಾಯ್ದಿದ್ದಾರೆ, ಇರಲಿ ಅವರಿಗೂ ನನಗೂ ಇದ್ದಿದ್ದೆ. ನಾನು ಅವರಿಗೆ ಈ ಹಿಂದೆನೆ ಹೇಳಿದ್ದೇನೆ, ನೀನು ಹೇಗಿದ್ರು ಎಂಪಿಯಾಗಿ ಹೋಗೋದಿಲ್ಲ, ಅದು ಬೇರೆ ಮಾತು ಬಿಡಿ. ಈ ಹಿಂದೆಯೇ ನನ್ನ ಬಗ್ಗೆ ಚರ್ಚೆ ಮಾಡೋಕೆ ಟಿವಿಗೆ ಕರೀರಿ ಬರ್ತಿನಿ, ಇಲ್ಲ ವಿಧಾನಸಭೆಯಲ್ಲೇ ಮಾತಾಡೋಣ ಎಂದಿದ್ದೆ. ಯಾಕಂದ್ರೆ ಆಸ್ತಿ ಬಗ್ಗೆ ಮಾತನಾಡುವಾಗ ದಾಖಲೆ ಇರಬೇಕಲ್ಲ ಎಂದರು.

ನಾನ್ಯಾವುದೋ ಹೆಣ್ಮಗಳನ್ನು ಕರ್ಕೊಂಡು ಹೋಗಿ ಆಸ್ತಿ ಬರೆಸಿಕೊಂಡಿದ್ದೇನೆ ಅಂತೆ. ಮಿಸ್ಟರ್ ಕುಮಾರಸ್ವಾಮಿ, ಮಿಸ್ಟರ್ ಕುಮಾರಸ್ವಾಮಿ, ನೀನು ಲೋಕಸಭಾ ಚುನಾವಣೆ ಗೆಲ್ಲಲ್ಲ. ಹೆದರಿಕೊಂಡು ನಿನ್ನ ಕ್ಷೇತ್ರ ಬಿಟ್ಟು, ಪಕ್ಕದ ಕ್ಷೇತ್ರಕ್ಕೆ ಹೋಗಿದೀಯಾ ಹೋಗು. ನಿಂಗೆ ಹೋಗೋಕೆ ಹಕ್ಕಿದೆ, ಹೋಗಿದೀಯಾ. ಇದನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಬನ್ನಿ. ಯಾಕೆಂದ್ರೆ ನಮ್ಮ ಜನರೇಷನ್ ನೀನೆಂಥ ಸುಳ್ಳುಗಾರ, ನೀನೆಂಥ ಮೋಸಗಾರ ಎಂಬುದನ್ನು ನೋಡಬೇಕು. ನಿಂದು ಎಷ್ಟಿತ್ತು, ನಿಮ್ಮ ಅಣ್ಣಂದು ಎಷ್ಟಿತ್ತು, ನಿಮ್ಮ ಕುಟುಂಬದ ಆಸ್ತಿ ಎಷ್ಟಿದೆ. ಬಾ ಅಸೆಂಬ್ಲಿಯಲ್ಲಿ ಮಾತಾಡೋಣ ಎಂದು ಬಹಿರಂಗ ಸವಾಲು ಹಾಕಿದ ಅವರು, ನಾನು ಕಲ್ಲು ಮಾರಿದ್ನೋ, ಕಳ್ಳತನ ಮಾಡಿದ್ನೋ ಎಂಬುದು ಅಸೆಂಬ್ಲಿಯಲ್ಲೇ ತೀರ್ಮಾನ ಆಗಲಿ ಎಂದು ಹೇಳಿದರು.
ಮಹಿಳೆಯರಿಗೆ ಅನುಕೂಲ ಆಗಲಿ ಎಂದು ಉಚಿತ ಬಸ್ ಹಾಗೂ 2 ಸಾವಿರ ರೂ. ಕೊಡುತ್ತಿದ್ದೇವೆ. ಅದನ್ನು ನೀನು ಹೋಗಿ ಹೆಣ್ಮಕ್ಳು ದಾರಿ ತಪ್ತಿದ್ದಾರೆ ಅಂದ್ರೇ ಏನರ್ಥ. ನಮ್ಮ ಹೆಣ್ಮಕ್ಳೇನು ದಡ್ಡರು ಅನ್ಕೊಂಡಿದೀರಾ ಎಂದು ಪ್ರಶ್ನಿಸಿದರು.
DK Shivakumar slams Kumaraswamy says he wont win, we will discuss how much money you and your brother did, lets discuss that in the assembly he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm