ಬ್ರೇಕಿಂಗ್ ನ್ಯೂಸ್
15-04-24 09:50 pm Bangalore Correspondent ಕರ್ನಾಟಕ
ಬೆಂಗಳೂರು, ಎ.15: ತನ್ನ ಪುತ್ರನಿಗೆ ಟಿಕೆಟ್ ಸಿಕ್ಕಿಲ್ಲವೆಂದು ಮುನಿಸಿಕೊಂಡು ಬಂಡಾಯ ಕಣಕ್ಕಿಳಿದಿರುವ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ರಾಜ್ಯ ಘಟಕ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಹೇಳುತ್ತಲೇ ಈಶ್ವರಪ್ಪ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬ್ರಹ್ಮ ಬಂದು ಹೇಳಿದರೂ ನಾಮಪತ್ರ ವಾಪಸ್ ಪಡೆಯಲ್ಲ ಎಂದೂ ಹೇಳಿದ್ದಾರೆ. ಆದರೆ ಈಶ್ವರಪ್ಪ ಸ್ಪರ್ಧೆಯಿಂದಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸಂಕಷ್ಟ ಉಂಟಾಗಿದ್ದು ಬಂಡಾಯ ಸ್ಪರ್ಧೆಯನ್ನು ಹಾಗೇ ಉಳಿಸಿಕೊಂಡರೆ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆಯೆಂದು ನಾಯಕರು ಗಂಭೀರ ಚಿಂತನೆಗೆ ಮುಂದಾಗಿದ್ದಾರೆ.

ಈಶ್ವರಪ್ಪರಿಗೆ ಇತ್ತೀಚೆಗೆ ಪಕ್ಷದ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ, ತಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದಿದ್ದರು. ಈಗ ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಈಶ್ವರಪ್ಪ ಅವರು ನಾಮಪತ್ರ ವಾಪಸ್ ಪಡೆಯದಿದ್ದರೆ ಪಕ್ಷ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
BJP State president B.Y. Vijayendra has said the party will take action against former Minister K.S. Eshwarappa, who filed the nomination papers for Shivamogga Lok Sabha constituency as an Independent candidate.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm