ಬ್ರೇಕಿಂಗ್ ನ್ಯೂಸ್
16-04-24 10:04 pm Bangalore Correspondent ಕರ್ನಾಟಕ
ಬೆಂಗಳೂರು, ಏಪ್ರಿಲ್ 16: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಉಗ್ರರು ಹಲವು ವಿಚಾರಗಳನ್ನು ಬಾಯಿಬಿಟ್ಟಿದ್ದು, ತಮ್ಮ ಗುರಿ ವೈಟ್ಫೀಲ್ಡ್ನಲ್ಲಿ ಐಟಿ ಕಂಪನಿಯೇ ಆಗಿತ್ತು ಹೇಳಿದ್ದಾರೆ. ಐಟಿ ಕಂಪನಿಗಳಲ್ಲಿ ಹೈ ಸೆಕ್ಯುರಿಟಿ ಇದ್ದುದರಿಂದ ಗುರಿ ಬದಲಾಗಿತ್ತು ಎಂದಿದ್ದಾರೆ.
ವೈಟ್ಫೀಲ್ಡ್ನಲ್ಲಿ ಐಟಿ ಕಂಪನಿಯಲ್ಲಿ ಸ್ಫೋಟಗೊಳಿಸಲು ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಯೋಜಿಸಿದ್ದರು. ವೈಟ್ ಫೀಲ್ಡ್ ಪ್ರದೇಶದಲ್ಲಿ ಸಾಕಷ್ಟು ಐಟಿಬಿಟಿ ಕಂಪನಿಗಳಿದ್ದು ಸಾವಿರಾರು ಜನ ಟೆಕ್ಕಿಗಳು ಕೆಲಸ ಮಾಡುತ್ತಾರೆ. ಇಲ್ಲಿ ಬಾಂಬ್ ಸ್ಫೋಟಿಸಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತೆ ಮತ್ತು ಅದರಿಂದ ಐಟಿ ರಾಜಧಾನಿ ಎಂಬ ಹೆಸರಿಗೆ ಕುತ್ತು ಬರುತ್ತೆ ಎಂದು ಯೋಜನೆ ಹಾಕಿದ್ದರು.
ಇದಕ್ಕಾಗಿ ವೈಟ್ಫೀಲ್ಡ್ ಪ್ರದೇಶದಲ್ಲಿ ಹಲವೆಡೆ ಓಡಾಡಿದ್ದ ಇವರು, ಬಾಂಬ್ ಇಡುವುದು ಹೇಗೆಂದು ತಲೆಕೆಡಿಸಿದ್ದರು. ಕಂಪನಿಗಳಲ್ಲಿ ಟೈಟ್ ಸೆಕ್ಯುರಿಟಿ, ಸಿಸಿಟಿವಿಗಳ ಕಣ್ಗಾವಲು, ಮೆಟಲ್ ಡಿಟೆಕ್ಟರ್ಸ್ ಇರುವುದರಿಂದ ಒಳಗೆ ಹೋಗುವುದು ಸುಲಭವಲ್ಲವೆಂದು ಅರಿತು ತಮ್ಮ ಯೋಜನೆ ಬದಲಿಸಿದ್ದರು. ಅಷ್ಟರಲ್ಲೇ ರಾಮೇಶ್ವರಂ ಕೆಫೆ ಇವರ ಕಣ್ಣಿಗೆ ಬಿದ್ದಿತ್ತು. ಕೆಫೆಗೆ ಹೆಚ್ಚಾಗಿ ಟೆಕ್ಕಿಗಳು ಬರುತ್ತಿದ್ದುದಲ್ಲದೆ, ಒಳಗಡೆ ಹೋಗುವಾಗ ಚೆಕಿಂಗ್ ಇಲ್ಲವೆಂದು ಯೋಜನೆ ಹಾಕಿದ್ದಾರೆ. ಇದಲ್ಲದೆ, ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಯದಲ್ಲಿ ಕೆಫೆ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆದಿದ್ದಕ್ಕಾಗಿ ಅದೇ ಕೆಫೆಯನ್ನು ಟಾರ್ಗೆಟ್ ಮಾಡಿದ್ದರು.
ಅದರಂತೆ, ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ಹೂಡಿ ಪ್ಲಾನ್ ಜಾರಿ ಮಾಡಿದ್ದರು. ಈ ವಿಚಾರವನ್ನು ಇಬ್ಬರು ಆರೋಪಿಗಳು ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಹೇಳಿದ್ದಾರೆ.
The probe in the Rameshwaram cafe blast case has revealed that the initial plan of the terrorists was to explode a bomb on the premises of an IT park in the tech corridor of Bengaluru city, sources said on Tuesday. The arrested men have also confessed that because of the high security, they could not plant the bomb on the premises of the IT parks.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm