ಬ್ರೇಕಿಂಗ್ ನ್ಯೂಸ್
16-04-24 10:18 pm Bangalore Correspondent ಕರ್ನಾಟಕ
ಬೆಂಗಳೂರು, ಎ.16: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ @ prakashraaj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ ಎಂದು ಜೆಡಿಎಸ್ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಎಕ್ಸ್ ನಲ್ಲಿ ಬರೆದುಕೊಂಡಿರುವ ರಾಜ್ಯ ಜೆಡಿಎಸ್, ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ.. ಎಂದು ಪ್ರಶ್ನಿಸಿದೆ.
ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್ ಸರಕಾರಕ್ಕೆ ಕೈ ಬರುತ್ತಿಲ್ಲ. ಅಲ್ಲಿನ ಮಕ್ಕಳಿಗೆ ಒಳ್ಳೇ ಆಹಾರವಿಲ್ಲ, ನೀರೂ ಇಲ್ಲ. ಸರಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ 'ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ ಸರಕಾರ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ. Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ ಎಂದು ತಪರಾಕಿ ಹಾಕಿದೆ.
ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಿಸಿ ಫ್ರಂಟ್ ಎಂಬ ಮಟ್ಟು-ಪಟ್ಟಿನ ಕಳ್ಳ ಕಂಪನಿಗೆ ಕೋಟಿ ಕೋಟಿ ಸುರಿದಿರುವ ಕರ್ನಾಟಕ ಕಾಂಗ್ರೆಸ್ ಸರಕಾರ, ನಿಮ್ಮ 'ನಿರ್ದಿಗಂತʼಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಕಸ ಹೊಡೆಯೋರಿಗೆ ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವೋರಿಗೆ ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ!! ಹೆಂಗೆ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ ಎಂದು ಜೆಡಿಎಸ್ ಕಿಡಿ ಕಾರಿದೆ.
'ದಿ ಫೈಲ್ ' ಮಾಡಿರುವ ವರದಿಯನ್ನು ಉಲ್ಲೇಖಿಸಿ ಜೆಡಿಎಸ್ ಈ ಪ್ರಶ್ನೆಗಳನ್ನು ಎತ್ತಿದೆ. ನಿರ್ದಿಗಂತ ಹೆಸರಲ್ಲಿ ಪ್ರಕಾಶ್ ರೈ ಕಂಪನಿ ಹುಟ್ಟು ಹಾಕಿದ್ದು ರಾಜ್ಯದಾದ್ಯಂತ ನಾಟಕಗಳನ್ನು ಮಾಡುತ್ತಿದೆ. ಇದನ್ನೇ ಮುಂದಿಟ್ಟು ಜೆಡಿಎಸ್ ನಾಯಕರು ಕಾಂಗ್ರೆಸ್ ಮತ್ತು ಪ್ರಕಾಶ್ ರೈಗೆ ಪ್ರಶ್ನೆ ಮಾಡಿದ್ದಾರೆ.
•ಕರ್ನಾಟಕದಲ್ಲಿ @INCKarnataka ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ @prakashraaj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ.
— Janata Dal Secular (@JanataDal_S) April 16, 2024
ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ?
Just… pic.twitter.com/xiKahlW0TY
Prakash Raj, who was reacting to former Chief Minister HD Kumaraswamy's statement referring to rural women while talking about the Congress government's guarantee scheme, questioned whether Kumaraswamy's errant son should win the election.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm