ಬ್ರೇಕಿಂಗ್ ನ್ಯೂಸ್
17-04-24 06:55 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.17: ಧಾರವಾಡದ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ತೆಯಾದ 18 ಕೋಟಿ ನಗದು ಹಣ ಪ್ರಕರಣದಲ್ಲಿ ಐಟಿ ಅಧಿಕಾರಿಗಳ ತನಿಖೆ ಅಂತ್ಯಗೊಂಡಿದ್ದು ಹಣದ ಕಂತೆಯನ್ನು 18 ಬ್ಯಾಗ್ಗಳಲ್ಲಿ ತುಂಬಿಸಿ ಹುಬ್ಬಳ್ಳಿ ಕೇಶ್ವಾಪುರದ ಎಸ್ಬಿಐ ಶಾಖೆಗೆ ರವಾನಿಸಿದ್ದಾರೆ.
ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇದ್ದ ಬಸವರಾಜ್ ದತ್ತುನವರ್ ನಿವಾಸ ಅರ್ನಾ ರೆಸಿಡೆನ್ಸಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಪ್ರಾರಂಭಿಸಿದ್ದರು. ನಿನ್ನೆಯಿಂದ ಹಣದ ಮಶಿನ್ ತಂದು ಹಣದ ಎಣಿಕೆ ನಡೆಸಿದ್ದು ಇಂದು ಮಧ್ಯಾಹ್ನ ಹೊತ್ತಿಗೆ ಪೂರ್ತಿಯಾಗಿದೆ. ಅಕ್ರಮ ಮದ್ಯ ಸಂಗ್ರಹಿಸಿದ್ದಾರೆ ಎನ್ನುವ ಮಾಹಿತಿ ಮೇರೆಗೆ ದಾಳಿ ನಡೆದಿತ್ತು. ಚುನಾವಣಾ ವಿಚಕ್ಷಣ ದಳ ದಾಳಿ ನಡೆಸಿದ್ದು ಈ ವೇಳೆ ದತ್ತೂನವರ ಮನೆಯಲ್ಲಿ ಕಂತೆ ಕಂತೆ ನಗದು ಪತ್ತೆಯಾಗಿತ್ತು. ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದರಿಂದ ಐಟಿ ಅಧಿಕಾರಿಗಳು ನಿನ್ನೆ ರಾತ್ರಿಯೇ ಪ್ರಕರಣವನ್ನು ತಮ್ಮ ಸುಪರ್ದಿಗೆ ಪಡೆದಿದ್ದರು. ಹಣ ಎಣಿಸಿ 18 ಬ್ಯಾಗ್ ಗಳಲ್ಲಿ ಪ್ಯಾಕ್ ಮಾಡಿ ಬ್ಯಾಂಕಿಗೆ ಸಾಗಿಸಿದ್ದಾರೆ.

ಇದೇ ವೇಳೆ, ಬಸವರಾಜ್ ದತ್ತುನವರ್ ಅವರನ್ನು ವಿಚಾರಣೆ ನಡೆಸಿದ್ದು ತಾನು ಯು.ಬಿ. ಶೆಟ್ಟಿ ಕನಸ್ಟ್ರಕ್ಷನ್ ಕಂಪನಿಯಲ್ಲಿ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದ. ಈ ಹಿನ್ನೆಲೆ ಹುಬ್ಬಳ್ಳಿಯ ಕಂಪನಿ ಕಚೇರಿಯಲ್ಲಿಯೂ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಉದ್ಯಮಿ ಮತ್ತು ಹುಬ್ಬಳ್ಳಿ ಭಾಗದಲ್ಲಿ ಕಂಟ್ರಾಕ್ಟರ್ ಆಗಿರುವ ಯುಬಿ ಶೆಟ್ಟಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದು ಧಾರವಾಡ ಮತ್ತು ಹುಬ್ಬಳ್ಳಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಈ ಹಣ ಕೂಡಿಡಲಾಗಿತ್ತು ಎಂಬ ಆರೋಪಗಳಿವೆ.
ಯು.ಬಿ. ಶೆಟ್ಟಿ ಕಚೇರಿಯಲ್ಲಿ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು, 18 ಕೋಟಿ ಹಣದ ಮೂಲದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಹಣ ಯಾರಿಗೆ ಸೇರಿದ್ದು, ಬಸವರಾಜ್ ದತ್ತುನವರ್ ಮನೆಯಲ್ಲಿ ಹಣ ಹೇಗೆ ಬಂತು? ಅಷ್ಟೊಂದು ದೊಡ್ಡ ಮೊತ್ತದ ಹಣ ಮನೆಯಲ್ಲಿ ಇಟ್ಟುಕೊಂಡಿದ್ದು ಏಕೆ? ಇದು ಯಾರಿಗೆ ಸೇರಿದ್ದು ಎನ್ನುವ ಬಗ್ಗೆ ತನಿಖೆ ಆರಂಭಿಸಿದ್ದಾರೆ.
Income Tax (I-T) officials seized Rs 18 crore during a raid from the house of U B Shetty’s accountant Basavaraja Dutunavar at Aarna Residency near Dasanakoppa Circle here. The seized money was later deposited at State Bank of India (SBI) Keshwapur branch in Hubballi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm