ಬ್ರೇಕಿಂಗ್ ನ್ಯೂಸ್
17-04-24 06:55 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.17: ಧಾರವಾಡದ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ತೆಯಾದ 18 ಕೋಟಿ ನಗದು ಹಣ ಪ್ರಕರಣದಲ್ಲಿ ಐಟಿ ಅಧಿಕಾರಿಗಳ ತನಿಖೆ ಅಂತ್ಯಗೊಂಡಿದ್ದು ಹಣದ ಕಂತೆಯನ್ನು 18 ಬ್ಯಾಗ್ಗಳಲ್ಲಿ ತುಂಬಿಸಿ ಹುಬ್ಬಳ್ಳಿ ಕೇಶ್ವಾಪುರದ ಎಸ್ಬಿಐ ಶಾಖೆಗೆ ರವಾನಿಸಿದ್ದಾರೆ.
ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇದ್ದ ಬಸವರಾಜ್ ದತ್ತುನವರ್ ನಿವಾಸ ಅರ್ನಾ ರೆಸಿಡೆನ್ಸಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಪ್ರಾರಂಭಿಸಿದ್ದರು. ನಿನ್ನೆಯಿಂದ ಹಣದ ಮಶಿನ್ ತಂದು ಹಣದ ಎಣಿಕೆ ನಡೆಸಿದ್ದು ಇಂದು ಮಧ್ಯಾಹ್ನ ಹೊತ್ತಿಗೆ ಪೂರ್ತಿಯಾಗಿದೆ. ಅಕ್ರಮ ಮದ್ಯ ಸಂಗ್ರಹಿಸಿದ್ದಾರೆ ಎನ್ನುವ ಮಾಹಿತಿ ಮೇರೆಗೆ ದಾಳಿ ನಡೆದಿತ್ತು. ಚುನಾವಣಾ ವಿಚಕ್ಷಣ ದಳ ದಾಳಿ ನಡೆಸಿದ್ದು ಈ ವೇಳೆ ದತ್ತೂನವರ ಮನೆಯಲ್ಲಿ ಕಂತೆ ಕಂತೆ ನಗದು ಪತ್ತೆಯಾಗಿತ್ತು. ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದರಿಂದ ಐಟಿ ಅಧಿಕಾರಿಗಳು ನಿನ್ನೆ ರಾತ್ರಿಯೇ ಪ್ರಕರಣವನ್ನು ತಮ್ಮ ಸುಪರ್ದಿಗೆ ಪಡೆದಿದ್ದರು. ಹಣ ಎಣಿಸಿ 18 ಬ್ಯಾಗ್ ಗಳಲ್ಲಿ ಪ್ಯಾಕ್ ಮಾಡಿ ಬ್ಯಾಂಕಿಗೆ ಸಾಗಿಸಿದ್ದಾರೆ.

ಇದೇ ವೇಳೆ, ಬಸವರಾಜ್ ದತ್ತುನವರ್ ಅವರನ್ನು ವಿಚಾರಣೆ ನಡೆಸಿದ್ದು ತಾನು ಯು.ಬಿ. ಶೆಟ್ಟಿ ಕನಸ್ಟ್ರಕ್ಷನ್ ಕಂಪನಿಯಲ್ಲಿ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದ. ಈ ಹಿನ್ನೆಲೆ ಹುಬ್ಬಳ್ಳಿಯ ಕಂಪನಿ ಕಚೇರಿಯಲ್ಲಿಯೂ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಉದ್ಯಮಿ ಮತ್ತು ಹುಬ್ಬಳ್ಳಿ ಭಾಗದಲ್ಲಿ ಕಂಟ್ರಾಕ್ಟರ್ ಆಗಿರುವ ಯುಬಿ ಶೆಟ್ಟಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದು ಧಾರವಾಡ ಮತ್ತು ಹುಬ್ಬಳ್ಳಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಈ ಹಣ ಕೂಡಿಡಲಾಗಿತ್ತು ಎಂಬ ಆರೋಪಗಳಿವೆ.
ಯು.ಬಿ. ಶೆಟ್ಟಿ ಕಚೇರಿಯಲ್ಲಿ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು, 18 ಕೋಟಿ ಹಣದ ಮೂಲದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಹಣ ಯಾರಿಗೆ ಸೇರಿದ್ದು, ಬಸವರಾಜ್ ದತ್ತುನವರ್ ಮನೆಯಲ್ಲಿ ಹಣ ಹೇಗೆ ಬಂತು? ಅಷ್ಟೊಂದು ದೊಡ್ಡ ಮೊತ್ತದ ಹಣ ಮನೆಯಲ್ಲಿ ಇಟ್ಟುಕೊಂಡಿದ್ದು ಏಕೆ? ಇದು ಯಾರಿಗೆ ಸೇರಿದ್ದು ಎನ್ನುವ ಬಗ್ಗೆ ತನಿಖೆ ಆರಂಭಿಸಿದ್ದಾರೆ.
Income Tax (I-T) officials seized Rs 18 crore during a raid from the house of U B Shetty’s accountant Basavaraja Dutunavar at Aarna Residency near Dasanakoppa Circle here. The seized money was later deposited at State Bank of India (SBI) Keshwapur branch in Hubballi.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm