ಬ್ರೇಕಿಂಗ್ ನ್ಯೂಸ್
17-04-24 07:50 pm Bangalore Correspondent ಕರ್ನಾಟಕ
ಬೆಂಗಳೂರು, ಏ.17: YouTube ವೀವ್ಸ್ ಹೆಚ್ಚಿಸಿಕೊಳ್ಳಲು ಏನೇನೋ ಮಾಡಿದರೆ ಕೇಸ್ ಬೀಳೋದು ಪಕ್ಕಾ. ಯಾಕೆಂದರೆ ಇಲ್ಲೊಬ್ಬ ಯುವಕ ಏರ್ಪೋರ್ಟ್ನಲ್ಲಿ ವಿಡಿಯೊ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೊ ಶೂಟ್ ಮಾಡಿದ ಯುಟ್ಯೂಬರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಯುಟ್ಯೂಬ್ ಚಾನೆಲ್ನಲ್ಲಿ ವೀವ್ಸ್ ಹೆಚ್ಚಿಸಿಕೊಳ್ಳುವ ಭರದಲ್ಲಿ ನಿಯಮ ಮೀರಿ ವಿಡಿಯೊ ಮಾಡಿದ್ದರಿಂದ ಯುವಕನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ, ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಯಲಹಂಕ ಮೂಲದ ಯುಟ್ಯೂಬರ್ ವಿಕಾಸ್ ಗೌಡ ಬಂಧಿತ. ಏರ್ಪೋರ್ಟ್ ರನ್ ವೇ ಚಿತ್ರೀಕರಣ ಮಾಡಿ ಯುಟ್ಯೂಬರ್ ಸಿಕ್ಕಿಹಾಕಿಕೊಂಡಿದ್ದು, ಟಿಕೆಟ್ ಇಲ್ಲದೆ ಒಳಗಡೆ ಹೋಗಿದ್ದೆ, 24 ಗಂಟೆ ರನ್ ವೇ ಬಳಿಯೇ ಇದ್ದೆ ಎಂದು ವಿಡಿಯೊದಲ್ಲಿ ಯುವಕ ಹೇಳಿಕೊಂಡಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಸಿಐಎಸ್ಎಫ್ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಏರ್ಪೋರ್ಟ್ ಠಾಣೆ ಪೊಲೀಸರು ಯುಟ್ಯೂಬರ್ ವಿಕಾಸ್ ಗೌಡನನ್ನು ಬಂಧಿಸಿದ್ದಾರೆ.
ವಿಡಿಯೊ ಮಾಡುವ ವೇಳೆ ಟಿಕೆಟ್ ಪಡೆಯದೆ ಒಳಗೆ ಹೋಗಿರುವುದಾಗಿ ಯುವಕ ಹೇಳಿಕೊಂಡಿದ್ದ. ಆದರೆ, ಪೊಲೀಸರ ವಿಚಾರಣೆ ವೇಳೆ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿರುವುದಾಗಿ ಹೇಳಿದ್ದಾನೆ. ಟಿಕೆಟ್ ಪಡೆದು ಪ್ರಯಾಣ ಮಾಡದೇ ಯುವಕ ರನ್ ವೇನಲ್ಲಿ ಉಳಿದುಕೊಂಡಿದ್ದ. ಸುಮಾರು ನಾಲ್ಕೈದು ಗಂಟೆಗಳ ಕಾಲ ಅಲ್ಲೇ ಇದ್ದು, ವಿಡಿಯೊ ಮಾಡಿಕೊಂಡು ಬಂದಿದ್ದ.
ಎಲ್ಲಾ ಅಧಿಕಾರಿ, ಸಿಬ್ಬಂದಿ ಕಣ್ತಪ್ಪಿಸಿ ಏರ್ಪೋರ್ಟ್ ಪ್ರವೇಶ ಮಾಡಿದ್ದಾಗಿ ವಿಡಿಯೋ ಮಾಡಿದ್ದರಿಂದ ವಿಕಾಸ್ನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 23-year-old YouTuber has been arrested and booked by Bengaluru airport police for breaching airport security under the pretext of travelling from Bengaluru to Chennai. The YouTuber uploaded a video on April 12 on his YouTube channel, mocking the security inside Kempegowda International Airport. He will face stringent legal action as entering a sensitive area like an airport is not acceptable, said sources.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm