ಬ್ರೇಕಿಂಗ್ ನ್ಯೂಸ್
01-12-20 01:57 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.1: ನಮ್ಮಿಂದ ಸಹಾಯ ಪಡೆದು, ಸರಕಾರ ರಚಿಸಿಕೊಂಡು ಅಧಿಕಾರ ಅನುಭವಿಸುತ್ತಿರುವ ಮಂದಿ ನನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ನಾನೇನು ಸಚಿವ ಸ್ಥಾನಕ್ಕೆ ಕಾಯುತ್ತಿರುವ ಮನುಷ್ಯ ಅಲ್ಲ. ರಾಜಕಾರಣವನ್ನು ವ್ಯವಹಾರದ ರೂಪದಲ್ಲಿ ತೆಗೆದುಕೊಂಡವನೂ ನಾನಲ್ಲ. ಸಾಂಸ್ಕೃತಿಕ ಹೋರಾಟದ ಪ್ರತೀಕವಾಗಿ ರಾಜಕೀಯ ಮಾಡುತ್ತಾ ಬಂದವನು. ಸಚಿವನಾಗಿ, ಶಾಸಕನಾಗಿ ನನ್ನ ಕಾರ್ಯ ವೈಖರಿ ಜನರಿಗೆ ಗೊತ್ತಿದೆ. ಆದರೆ ನನ್ನ ಕಷ್ಟಕಾಲದಲ್ಲಿ ಎಲ್ಲರೂ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಕೋರ್ ಕಮಿಟಿ ಮೊದಲ ಪಟ್ಟಿ ಕಳುಹಿಸಿದ್ದಾಗ ನನ್ನ ಹೆಸರಿತ್ತು. ಆದರೆ, ಆಬಳಿಕ ಪಟ್ಟಿಯಲ್ಲಿ ಹೆಸರು ಮಾಯವಾಗಿತ್ತು. ಇದು ಹೇಗಾಯ್ತು ಎನ್ನುವುದು ನನಗೆ ತಿಳಿದಿಲ್ಲ. ನನ್ನ ಹೆಸರನ್ನು ಯಾಕಾಗಿ ಪಟ್ಟಿಯಿಂದ ತೆಗೆಸಿದರು ಎನ್ನುವುದೂ ತಿಳಿದಿಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಅಸಮಾಧಾನ ತೋಡಿಕೊಂಡರು. ಹೈಕೋರ್ಟ್ ತೀರ್ಪು ಸಚಿವ ಸ್ಥಾನಕ್ಕೆ ಮಾತ್ರ ಸೀಮಿತ. ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೊಂದರೆಯಿಲ್ಲ.
ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಅವರು, ಹಾಗೆ ನೋಡಿದರೆ ಆರಂಭದಲ್ಲಿ ಸಂಘ ಪರಿವಾರದ ಬೆಂಬಲ ಸಿಕ್ಕಿತ್ತು. ಈಗ ಕಷ್ಟಕಾಲದಲ್ಲಿ ಮಾತ್ರ ನೆರವು ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಕೂಡ ಅನಾದರ ತೋರಿದರು ಎಂದು ಹೇಳಿಕೊಂಡರು.
ಈ ಬಗ್ಗೆ ಯಡಿಯೂರಪ್ಪ ಅವರೊಡನೆ ಮಾತುಕತೆ ನಡೆಸುತ್ತೇನೆ. ನನ್ನ ಜೊತೆಗೆ ಬಿಜೆಪಿಗೆ ಬಂದವರೆಲ್ಲ ನನ್ನ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ಹಲವರು ಫೋನ್ ಮಾಡಿ ವಿಚಾರಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
21-09-24 11:17 pm
HK News Desk
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
22-09-24 01:16 pm
Mangalore Correspondent
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
21-09-24 10:56 pm
Mangalore Correspondent
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm