ಬ್ರೇಕಿಂಗ್ ನ್ಯೂಸ್
01-12-20 01:57 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.1: ನಮ್ಮಿಂದ ಸಹಾಯ ಪಡೆದು, ಸರಕಾರ ರಚಿಸಿಕೊಂಡು ಅಧಿಕಾರ ಅನುಭವಿಸುತ್ತಿರುವ ಮಂದಿ ನನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ನಾನೇನು ಸಚಿವ ಸ್ಥಾನಕ್ಕೆ ಕಾಯುತ್ತಿರುವ ಮನುಷ್ಯ ಅಲ್ಲ. ರಾಜಕಾರಣವನ್ನು ವ್ಯವಹಾರದ ರೂಪದಲ್ಲಿ ತೆಗೆದುಕೊಂಡವನೂ ನಾನಲ್ಲ. ಸಾಂಸ್ಕೃತಿಕ ಹೋರಾಟದ ಪ್ರತೀಕವಾಗಿ ರಾಜಕೀಯ ಮಾಡುತ್ತಾ ಬಂದವನು. ಸಚಿವನಾಗಿ, ಶಾಸಕನಾಗಿ ನನ್ನ ಕಾರ್ಯ ವೈಖರಿ ಜನರಿಗೆ ಗೊತ್ತಿದೆ. ಆದರೆ ನನ್ನ ಕಷ್ಟಕಾಲದಲ್ಲಿ ಎಲ್ಲರೂ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಕೋರ್ ಕಮಿಟಿ ಮೊದಲ ಪಟ್ಟಿ ಕಳುಹಿಸಿದ್ದಾಗ ನನ್ನ ಹೆಸರಿತ್ತು. ಆದರೆ, ಆಬಳಿಕ ಪಟ್ಟಿಯಲ್ಲಿ ಹೆಸರು ಮಾಯವಾಗಿತ್ತು. ಇದು ಹೇಗಾಯ್ತು ಎನ್ನುವುದು ನನಗೆ ತಿಳಿದಿಲ್ಲ. ನನ್ನ ಹೆಸರನ್ನು ಯಾಕಾಗಿ ಪಟ್ಟಿಯಿಂದ ತೆಗೆಸಿದರು ಎನ್ನುವುದೂ ತಿಳಿದಿಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಅಸಮಾಧಾನ ತೋಡಿಕೊಂಡರು. ಹೈಕೋರ್ಟ್ ತೀರ್ಪು ಸಚಿವ ಸ್ಥಾನಕ್ಕೆ ಮಾತ್ರ ಸೀಮಿತ. ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೊಂದರೆಯಿಲ್ಲ.
ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಅವರು, ಹಾಗೆ ನೋಡಿದರೆ ಆರಂಭದಲ್ಲಿ ಸಂಘ ಪರಿವಾರದ ಬೆಂಬಲ ಸಿಕ್ಕಿತ್ತು. ಈಗ ಕಷ್ಟಕಾಲದಲ್ಲಿ ಮಾತ್ರ ನೆರವು ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಕೂಡ ಅನಾದರ ತೋರಿದರು ಎಂದು ಹೇಳಿಕೊಂಡರು.
ಈ ಬಗ್ಗೆ ಯಡಿಯೂರಪ್ಪ ಅವರೊಡನೆ ಮಾತುಕತೆ ನಡೆಸುತ್ತೇನೆ. ನನ್ನ ಜೊತೆಗೆ ಬಿಜೆಪಿಗೆ ಬಂದವರೆಲ್ಲ ನನ್ನ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ಹಲವರು ಫೋನ್ ಮಾಡಿ ವಿಚಾರಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm