ಬ್ರೇಕಿಂಗ್ ನ್ಯೂಸ್
01-12-20 01:57 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.1: ನಮ್ಮಿಂದ ಸಹಾಯ ಪಡೆದು, ಸರಕಾರ ರಚಿಸಿಕೊಂಡು ಅಧಿಕಾರ ಅನುಭವಿಸುತ್ತಿರುವ ಮಂದಿ ನನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ನಾನೇನು ಸಚಿವ ಸ್ಥಾನಕ್ಕೆ ಕಾಯುತ್ತಿರುವ ಮನುಷ್ಯ ಅಲ್ಲ. ರಾಜಕಾರಣವನ್ನು ವ್ಯವಹಾರದ ರೂಪದಲ್ಲಿ ತೆಗೆದುಕೊಂಡವನೂ ನಾನಲ್ಲ. ಸಾಂಸ್ಕೃತಿಕ ಹೋರಾಟದ ಪ್ರತೀಕವಾಗಿ ರಾಜಕೀಯ ಮಾಡುತ್ತಾ ಬಂದವನು. ಸಚಿವನಾಗಿ, ಶಾಸಕನಾಗಿ ನನ್ನ ಕಾರ್ಯ ವೈಖರಿ ಜನರಿಗೆ ಗೊತ್ತಿದೆ. ಆದರೆ ನನ್ನ ಕಷ್ಟಕಾಲದಲ್ಲಿ ಎಲ್ಲರೂ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಕೋರ್ ಕಮಿಟಿ ಮೊದಲ ಪಟ್ಟಿ ಕಳುಹಿಸಿದ್ದಾಗ ನನ್ನ ಹೆಸರಿತ್ತು. ಆದರೆ, ಆಬಳಿಕ ಪಟ್ಟಿಯಲ್ಲಿ ಹೆಸರು ಮಾಯವಾಗಿತ್ತು. ಇದು ಹೇಗಾಯ್ತು ಎನ್ನುವುದು ನನಗೆ ತಿಳಿದಿಲ್ಲ. ನನ್ನ ಹೆಸರನ್ನು ಯಾಕಾಗಿ ಪಟ್ಟಿಯಿಂದ ತೆಗೆಸಿದರು ಎನ್ನುವುದೂ ತಿಳಿದಿಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಅಸಮಾಧಾನ ತೋಡಿಕೊಂಡರು. ಹೈಕೋರ್ಟ್ ತೀರ್ಪು ಸಚಿವ ಸ್ಥಾನಕ್ಕೆ ಮಾತ್ರ ಸೀಮಿತ. ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೊಂದರೆಯಿಲ್ಲ.
ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಅವರು, ಹಾಗೆ ನೋಡಿದರೆ ಆರಂಭದಲ್ಲಿ ಸಂಘ ಪರಿವಾರದ ಬೆಂಬಲ ಸಿಕ್ಕಿತ್ತು. ಈಗ ಕಷ್ಟಕಾಲದಲ್ಲಿ ಮಾತ್ರ ನೆರವು ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಕೂಡ ಅನಾದರ ತೋರಿದರು ಎಂದು ಹೇಳಿಕೊಂಡರು.
ಈ ಬಗ್ಗೆ ಯಡಿಯೂರಪ್ಪ ಅವರೊಡನೆ ಮಾತುಕತೆ ನಡೆಸುತ್ತೇನೆ. ನನ್ನ ಜೊತೆಗೆ ಬಿಜೆಪಿಗೆ ಬಂದವರೆಲ್ಲ ನನ್ನ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ಹಲವರು ಫೋನ್ ಮಾಡಿ ವಿಚಾರಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm