ಬ್ರೇಕಿಂಗ್ ನ್ಯೂಸ್
01-12-20 01:57 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.1: ನಮ್ಮಿಂದ ಸಹಾಯ ಪಡೆದು, ಸರಕಾರ ರಚಿಸಿಕೊಂಡು ಅಧಿಕಾರ ಅನುಭವಿಸುತ್ತಿರುವ ಮಂದಿ ನನ್ನ ಕಷ್ಟಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ನಾನೇನು ಸಚಿವ ಸ್ಥಾನಕ್ಕೆ ಕಾಯುತ್ತಿರುವ ಮನುಷ್ಯ ಅಲ್ಲ. ರಾಜಕಾರಣವನ್ನು ವ್ಯವಹಾರದ ರೂಪದಲ್ಲಿ ತೆಗೆದುಕೊಂಡವನೂ ನಾನಲ್ಲ. ಸಾಂಸ್ಕೃತಿಕ ಹೋರಾಟದ ಪ್ರತೀಕವಾಗಿ ರಾಜಕೀಯ ಮಾಡುತ್ತಾ ಬಂದವನು. ಸಚಿವನಾಗಿ, ಶಾಸಕನಾಗಿ ನನ್ನ ಕಾರ್ಯ ವೈಖರಿ ಜನರಿಗೆ ಗೊತ್ತಿದೆ. ಆದರೆ ನನ್ನ ಕಷ್ಟಕಾಲದಲ್ಲಿ ಎಲ್ಲರೂ ಕೈಬಿಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಕೋರ್ ಕಮಿಟಿ ಮೊದಲ ಪಟ್ಟಿ ಕಳುಹಿಸಿದ್ದಾಗ ನನ್ನ ಹೆಸರಿತ್ತು. ಆದರೆ, ಆಬಳಿಕ ಪಟ್ಟಿಯಲ್ಲಿ ಹೆಸರು ಮಾಯವಾಗಿತ್ತು. ಇದು ಹೇಗಾಯ್ತು ಎನ್ನುವುದು ನನಗೆ ತಿಳಿದಿಲ್ಲ. ನನ್ನ ಹೆಸರನ್ನು ಯಾಕಾಗಿ ಪಟ್ಟಿಯಿಂದ ತೆಗೆಸಿದರು ಎನ್ನುವುದೂ ತಿಳಿದಿಲ್ಲ ಎಂದು ಪರೋಕ್ಷವಾಗಿ ಸಂಘ ಪರಿವಾರದ ವಿರುದ್ಧ ಅಸಮಾಧಾನ ತೋಡಿಕೊಂಡರು. ಹೈಕೋರ್ಟ್ ತೀರ್ಪು ಸಚಿವ ಸ್ಥಾನಕ್ಕೆ ಮಾತ್ರ ಸೀಮಿತ. ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೊಂದರೆಯಿಲ್ಲ.
ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದ ಅವರು, ಹಾಗೆ ನೋಡಿದರೆ ಆರಂಭದಲ್ಲಿ ಸಂಘ ಪರಿವಾರದ ಬೆಂಬಲ ಸಿಕ್ಕಿತ್ತು. ಈಗ ಕಷ್ಟಕಾಲದಲ್ಲಿ ಮಾತ್ರ ನೆರವು ಸಿಗಲಿಲ್ಲ. ಅಡ್ವೊಕೇಟ್ ಜನರಲ್ ಕೂಡ ಅನಾದರ ತೋರಿದರು ಎಂದು ಹೇಳಿಕೊಂಡರು.
ಈ ಬಗ್ಗೆ ಯಡಿಯೂರಪ್ಪ ಅವರೊಡನೆ ಮಾತುಕತೆ ನಡೆಸುತ್ತೇನೆ. ನನ್ನ ಜೊತೆಗೆ ಬಿಜೆಪಿಗೆ ಬಂದವರೆಲ್ಲ ನನ್ನ ಜೊತೆಗಿದ್ದಾರೆ. ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್.ಟಿ. ಸೋಮಶೇಖರ್ ಸೇರಿ ಹಲವರು ಫೋನ್ ಮಾಡಿ ವಿಚಾರಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm