ಬ್ರೇಕಿಂಗ್ ನ್ಯೂಸ್
17-04-24 10:14 pm Bangalore Correspondent ಕರ್ನಾಟಕ
ಬೆಂಗಳೂರು, ಎ.17: ಲೋಕಸಭಾ ಚುನಾವಣೆ ಮುಕ್ತಾಯಗೊಂಡ 15 ದಿನಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದು ಡಿಕೆ ಶಿವಕುಮಾರ್ ಕರ್ನಾಟಕದ ಹೊಸ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಕಷ್ಟು ಪ್ಲ್ಯಾನ್ ಹಾಕಿದ್ದಾರೆ. ಬಾಗಲಕೋಟೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಮಗಳನ್ನ ಗೆಲ್ಲಿಸಿಕೊಟ್ಟರೆ ಶಿವಾನಂದ ಪಾಟೀಲ್ ನನ್ನ ಜೊತೆಗಿರ್ತಾರೆ. ನಾನು ಅವರು ಸೇರಿ ಸಿದ್ದರಾಮಯ್ಯ ಅವರನ್ನ ಇಳಿಸೋಕೆ ಕಾರ್ಯತಂತ್ರ ಮಾಡಿದ್ದೇವೆ ಎನ್ನುವ ಸಂದೇಶವನ್ನ ಜನರಿಗೆ ಡಿಕೆ ಶಿವಕುಮಾರ್ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಒಬ್ಬ ಸ್ವಾಮಿಜಿ ಜೊತೆಗೆ ಮಾತನಾಡಿ ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯನವರನ್ನು ಇಳಿಸಲು ನಮಗೆ ಲಿಂಗಾಯತರು ಸಪೋರ್ಟ್ ಮಾಡಬೇಕು ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪರವಾದ ಲೋಕಸಭಾ ಸದಸ್ಯರನ್ನು ಆಯ್ಕೆ ಮಾಡಿಕೊಂಡಿದ್ದು ಚುನಾವಣೆ ಮುಗಿದ 15 ದಿನದಲ್ಲೇ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ಲಿಂಗಾಯತರು, ಒಕ್ಕಲಿಗರು ಒಂದು ಎಂಬ ಸಂದೇಶ ಕೊಡಲು ಒಬ್ಬ ಸ್ವಾಮೀಜಿ ಪ್ರಯತ್ನ ಮಾಡಿದ್ದಾರೆ.
ಅದಕ್ಕೆ ಶಿವಾನಂದ ಪಾಟೀಲ ಅವರ ಮಗಳನ್ನು ಗೆಲ್ಲಿಸಿದರೆ, ಶಿವಾನಂದ ಪಾಟೀಲ ಹಾಗೂ ನಾನು ಸೇರಿ ಎಲ್ಲ ಸಿದ್ದರಾಮಯ್ಯನವರನ್ನು ಇಳಿಸುವ ಕಾರ್ಯತಂತ್ರ ಮಾಡಿದ್ದೇವೆ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ ಯತ್ನಾಳ್, ಕಾಂಗ್ರೆಸ್ ಇನ್ನು ಒಡೆದು ಹೋಗಿ ಹೊಸ ಸರ್ಕಾರ ರಚನೆಯಾಗುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯನವರಿಗೆ ಒಂದು ಕಿವಿಮಾತು ಹೇಳುತ್ತೇನೆ. ನೀವು ಡಿ.ಕೆ ಶಿವಕುಮಾರ್ ಪರವಾದ ಅಭ್ಯರ್ಥಿ ಗಳನ್ನು ಸೋಲಿಸದಿದ್ದರೆ ನಿಮ್ಮ ಮುಖ್ಯಮಂತ್ರಿ ಹುದ್ದೆ ಹೋಗುವದು ಗ್ಯಾರಂಟಿ. ಐದು ಗ್ಯಾರಂಟಿಗಳ ಜೊತೆಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಹೋಗುವುದು ಇದೊಂದು ಗ್ಯಾರಂಟಿ ಎಂದರು. ಬಾಗಲಕೋಟೆಯಲ್ಲಿ ಶಿವಾನಂದ ಪಾಟೀಲ, ಧಾರವಾಡದಲ್ಲಿ ಕೆಲವರು, ಬೆಳಗಾವಿ ಲೋಕಸಭಾ ಅಭ್ಯರ್ಥಿ ಡಿಕೆಶಿ ಬೆಂಬಲಿಗರು ಇದ್ದಾರೆ. ಅವರನ್ನು ನೀವು ಸೋಲಿಸಲೇ ಬೇಕು. ಇರದಿದ್ದರೆ ನಿಮ್ಮ ಸಿಎಂ ಹುದ್ದೆ ಹೋಗುವದು ಗ್ಯಾರಂಟಿ ಎಂದರು ಯತ್ನಾಳ.
ದೇಶಕ್ಕೆ ನರೇಂದ್ರ ಮೋದಿ ಅವರನ್ನು ಬಿಟ್ಟರೆ ಪರ್ಯಾಯ ನಾಯಕ ಇಲ್ಲ ಎಂಬುದು ಜನರಿಗೆ ತಿಳಿದಿದೆ. ಪ್ರತಿಯೊಬ್ಬರ ತಲೆಯಲ್ಲಿ ಮೋದಿ ಮತ್ತು ಬಿಜೆಪಿ ಇದೆ. ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಮೊದಲು ತಲೆಯಿಂದ ಜಾತಿ ಕಿತ್ತೊಗೆಯಿರಿ. ಮೋದಿಯವರು ಬಂದರೆ ಸನಾತನ ಧರ್ಮ ಉಳಿಯುತ್ತದೆ. ನಮ್ಮ ಜಾತಿಗಳು ಇರುತ್ತವೆ. ಎಲ್ಲ ಸಮುದಾಯದವರು ನೆಮ್ಮದಿಯಿಂದ ಜೀವನ ಮಾಡಲು ಸಾಧ್ಯ ಎಂದರು.
Bjp MLA Basavanagouda Yatnal has said that DK Shivakumar will be the new Chief Minister of Karnataka within 15 days of the conclusion of the Lok Sabha elections.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm